29 C
Mumbai
August 24, 2026
Mumbai News Kannada
ಸುದ್ದಿ

ದೆಹಲಿಯ ದಲಿತ ಕಾಲನಿಗೆ ಪೇಜಾವರ ಶ್ರೀಗಳ ಭೇಟಿ: ಏಕತೆ ಮತ್ತು ಸಾಮರಸ್ಯಕ್ಕೆ ಕರೆ





ಉಡುಪಿಯ ಪೇಜಾವರ ಮಠದ ಪೀಠಾಧಿಪತಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ದೆಹಲಿಯ ದಲಿತ ಕಾಲನಿಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಆತ್ಮೀಯವಾಗಿ ಬೆರೆತು, ಸಾಮಾಜಿಕ ಏಕತೆ ಮತ್ತು ಸಾಮರಸ್ಯದ ಸಂದೇಶ ಸಾರಿದರು.


ನೂರಾರು ಜನರೊಂದಿಗೆ ಕಾಲನಿಗೆ ತೆರಳಿದ ಶ್ರೀಪಾದರು ಅಲ್ಲಿನ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಐದು ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. ಸ್ಥಳೀಯರ ಆತ್ಮೀಯ ಸ್ವಾಗತ ಸ್ವೀಕರಿಸಿದ ಅವರು, ಸಮಾಜದ ಎಲ್ಲ ವರ್ಗಗಳ ನಡುವೆ ಪರಸ್ಪರ ಗೌರವ, ಸಹಕಾರ ಮತ್ತು ಸಹೋದರತ್ವ ಬೆಳೆಸುವ ಅಗತ್ಯವನ್ನು ಒತ್ತಿ ಹೇಳಿದರು.
ಸಮಾಜದ ಪ್ರಗತಿಗೆ ಶಿಕ್ಷಣ ಅತ್ಯಂತ ಪ್ರಮುಖವಾಗಿದ್ದು, ಮಕ್ಕಳು ಉತ್ತಮ ಶಿಕ್ಷಣ ಪಡೆಯುವಂತೆ ಪೋಷಕರು ಗಮನಹರಿಸಬೇಕು ಎಂದು ಶ್ರೀಪಾದರು ಸಲಹೆ ನೀಡಿದರು. ಯಾವುದೇ ರೀತಿಯ ಸಾಮಾಜಿಕ ಭೇದಭಾವಕ್ಕೆ ಅವಕಾಶ ನೀಡದೆ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂಬ ಸಂದೇಶವನ್ನು ಅವರು ನೀಡಿದರು.
ಶ್ರೀಪಾದರ ಭೇಟಿಯಿಂದ ಕಾಲನಿಯಲ್ಲಿ ಆತ್ಮೀಯ ಹಾಗೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದರು. ಸಮಾಜದ ಎಲ್ಲ ವರ್ಗಗಳನ್ನು ಒಂದೇ ಕುಟುಂಬದಂತೆ ಕಾಣುವ ಮನೋಭಾವ ಬೆಳೆಸುವ ಮೂಲಕ ಬಲಿಷ್ಠ ಮತ್ತು ಸಾಮರಸ್ಯಯುತ ಸಮಾಜ ನಿರ್ಮಿಸಬಹುದು ಎಂಬ ಆಶಯವನ್ನು ಈ ಭೇಟಿ ಮತ್ತೊಮ್ಮೆ ಬಲಪಡಿಸಿದೆ.



Related posts

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk