September 4, 2026
Mumbai News Kannada
ಪ್ರಕಟಣೆ

ಸೆ. 6: ಮಲಾಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣೆ





ಮುಂಬಯಿ: ಜಯ ಸಿ. ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ (ಮಲಾಡ್) ಮತ್ತು ಮಲಾಡ್ ಬಿಲ್ಲವಾಸ್ ಸಂಯುಕ್ತ ಆಶ್ರಯದಲ್ಲಿ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್ 6ರ ರವಿವಾರದಂದು ನೆರವೇರಲಿದೆ.

ಮಲಾಡ್ (ಪೂರ್ವ)ದ ದಫ್ತರಿ ರಸ್ತೆ, ಪುಷ್ಪಾ ಪಾರ್ಕ್ ಬಳಿ ಇರುವ ಉತ್ಕರ್ಷ್ ವಿದ್ಯಾ ಮಂದಿರದಲ್ಲಿ ಈ ಸಮಾರಂಭ ಆಯೋಜನೆಗೊಂಡಿದೆ.

ಕಾರ್ಯಕ್ರಮದ ವಿವರ:

  • ಸಂಜೆ 6.00 ರಿಂದ 7.00: ಭಜನೆ ಮತ್ತು ಜಪ-ಯಜ್ಞ
  • ಸಂಜೆ 7.30: ಮಂಗಳಾರತಿ, ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ
  • ರಾತ್ರಿ 7.30: ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣೆ

ಅತಿಥಿ ಗಣ್ಯರು:

  • ಮುಖ್ಯ ಅತಿಥಿ: ಸೂರ್ಯಕಾಂತ್ ಜಯ ಸುವರ್ಣ (ಕಾರ್ಯಾಧ್ಯಕ್ಷರು, ಭಾರತ್ ಸಹಕಾರಿ ಬ್ಯಾಂಕ್ (ಮುಂಬೈ) ಲಿಮಿಟೆಡ್; ಅಧ್ಯಕ್ಷರು, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮೂಲ್ಕಿ)
  • ಗೌರವ ಅತಿಥಿಗಳು: ಉದ್ಯಮಿಗಳಾದ ಸುರೇಶ್ ಎಸ್. ಶೆಟ್ಟಿ, ಚಂದ್ರಹಾಸ್ ಆರ್. ಸುವರ್ಣ, ಮನೀಶ್ ಹೆಚ್. ಪೂಜಾರಿ (ಶಿಪ್ಪಿಂಗ್, ತೃತೀಯ ಶ್ರೇಣಿ ಇಂಜಿನಿಯರ್) ಮತ್ತು ಅಶೋಕ್ ಕುಕ್ಕಿಯಾನ್ ಸಸಿಹಿತ್ಲು (ಅಧ್ಯಕ್ಷರು, ಶ್ರೀ ನಾರಾಯಣ ಗುರು ಭಜನಾ ಮಂಡಳಿ)

ಶ್ರೀ ನಾರಾಯಣ ಗುರು ಭಜನಾ ಮಂಡಳಿ (ಮಲಾಡ್) ಗೌರವ ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ ಹಾಗೂ ಅಧ್ಯಕ್ಷ ಹರಿಶ್ಚಂದ್ರ ಕೆ. ಪೂಜಾರಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.

ಗುರುಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಬೇಕಾಗಿ ಆಯೋಜಕರು ಕೋರಿದ್ದಾರೆ.

ವಿನಂತಿಸುವವರು: ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಗೌರವ ಕಾರ್ಯದರ್ಶಿ ಕೇಶವ ಎಸ್. ಪೂಜಾರಿ, ಕೋಶಾಧಿಕಾರಿ ಸಬಿತಾ ಜಿ. ಪೂಜಾರಿ; ಜಯ ಸಿ. ಸುವರ್ಣ ಅಭಿಮಾನಿ ಬಳಗ ಮತ್ತು ಬಿಲ್ಲವಾಸ್ ಪರವಾಗಿ ಕಾರ್ಯದರ್ಶಿ ಮೋಹನ್‌ದಾಸ್ ಜಿ. ಪೂಜಾರಿ, ಖಜಾಂಚಿ ಶಿವರಾಮ ಪೂಜಾರಿ; ಶ್ರೀ ನಾರಾಯಣ ಗುರು ಭಜನಾ ಮಂಡಳಿ (ಮಲಾಡ್) ಪರವಾಗಿ ಉಪಕಾರ್ಯಾಧ್ಯಕ್ಷರಾದ ಕೃಷ್ಣ ಎ. ಪೂಜಾರಿ, ಗಣೇಶ್ ಎಸ್. ಪೂಜಾರಿ, ಕಾರ್ಯದರ್ಶಿ ದಿನೇಶ್ ಸಿ. ಸಾಲಿಯಾನ್, ಜೊತೆ ಕಾರ್ಯದರ್ಶಿ ಚೇತನ್ ಡಿ. ಪೂಜಾರಿ, ಕೋಶಾಧಿಕಾರಿ ದೀಕ್ಷಿತ್ ಎಂ. ಪೂಜಾರಿ, ಜೊತೆ ಕೋಶಾಧಿಕಾರಿ ನಳಿನಿ ಪಿ. ಕರ್ಕೇರ; ಅರ್ಚಕರಾದ ಜಯ ಎಸ್. ಪೂಜಾರಿ, ಸುಂದರ್ ಎಂ. ಪೂಜಾರಿ, ರಾಮ ಡಿ. ಪೂಜಾರಿ ಹಾಗೂ ಸರ್ವ ಸಮಿತಿ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ಸದಸ್ಯರು.



Related posts

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ

Mumbai News Desk

ಡೊಂಬಿವಲಿ: ಆಗಸ್ಟ್ 16ರಂದು ‘ಆಟಿಡೊಂಜಿ ದಿನ’ ಕಾರ್ಯಕ್ರಮ

Mumbai News Desk

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.

Mumbai News Desk

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರ: ಏಪ್ರಿಲ್ 4 ಮತ್ತು 5ರಂದು 11ನೇ ವಾರ್ಷಿಕ ಮಹೋತ್ಸವ

Mumbai News Desk

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk