ಮುಂಬಯಿ: ಬಿಲ್ಲವರ ಅಸೋಸಿಯೇಷನ್ ಮುಂಬಯಿ ಪ್ರಾಯೋಜಿತ ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿಯ (ರಿ.) 2026-2027ನೇ ಸಾಲಿನ ತಿರುಗಾಟದ ಪ್ರಥಮ ಸೇವೆಯಾಗಿ ‘ಶ್ರೀ ಪಾಂಡವಾಶ್ವಮೇಧ’ ಎಂಬ ಪೌರಾಣಿಕ ಪ್ರಸಂಗದ ಯಕ್ಷಗಾನ ಪ್ರದರ್ಶನವು ಸೆಪ್ಟಂಬರ್ 20ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಜರುಗಲಿದೆ. ಉದ್ಯಮಿ ದಿವಂಗತ ಈಶ್ವರ್ ಹೆಜಮಾಡಿ ಅವರ ಸತ್ಪತ್ನಿ ಹಾಗೂ ಮಕ್ಕಳ ಸೇವಾರ್ಥವಾಗಿ ಈ ಪ್ರದರ್ಶನ ಆಯೋಜನೆಗೊಂಡಿದ್ದು, ಅಂದು ಮಧ್ಯಾಹ್ನ 2.30ಗಂಟೆಗೆ ಪ್ರದರ್ಶನ ಆರಂಭಗೊಳ್ಳಲಿದೆ. ಸುಂದರ ರಂಗಪ್ರಸಂಗ ಹಾಗೂ ವೈಭವೋಪೇತ ಕಲಾ ಪ್ರದರ್ಶನದೊಂದಿಗೆ ಮೂಡಿಬರಲಿರುವ ಈ ಯಕ್ಷಗಾನ ಸೇವೆಗೆ ಕಲಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಲಾಪೋಷಣೆ ಮಾಡುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಬೇಕಾಗಿ ಬಿಲ್ಲವರ ಅಸೋಸಿಯೇಷನ್ ಮುಂಬಯಿಯ ಗೌರವಾಧ್ಯಕ್ಷರಾದ ಎಲ್. ವಿ. ಅಮೀನ್, ಅಧ್ಯಕ್ಷರಾದ ಹರೀಶ್ ಜಿ. ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲಿಯಾನ್, ಗೌರವ ಕೋಶಾಧಿಕಾರಿ ರವಿ ಎಸ್. ಸನಿಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ. ಕೋಟ್ಯಾನ್ ಹಾಗೂ ಸಾಂಸ್ಕೃತಿಕ ಉಪಸಮಿತಿಯ ಕಾರ್ಯಾಧ್ಯಕ್ಷರಾದ ನವೀನ್ ಪೂಜಾರಿ ಪಡು ಇನ್ನಾ ಮತ್ತು ಗೌರವ ಕಾರ್ಯದರ್ಶಿ ಗೋಪಾಲಕೃಷ್ಣ ಆರ್. ಸಾಲ್ಯಾನ್ ಅವರು ವಿನಂತಿಸಿಕೊಂಡಿದ್ದಾರೆ.




