July 23, 2026
Mumbai News Kannada
ಸುದ್ದಿ

ಡ್ರಾಮಾ ಜ್ಯೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ








ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,
ಆಶೀರ್ವಾದ ಪಡೆದರು.
ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದಾಗ,
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.

ಇದೇ ಸಂಧರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ:
ಬೆಂಗಳೂರು: ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,

Mumbai News Desk

ಯುವ ಸಿಂಚನ ಪತ್ರಿಕೆಯ ಸಂಪಾದಕ, ಎನ್ ಎಸ್ ಸಿಡಿಎಫ್ ನ ಪ್ರಧಾನ ಕಾರ್ಯದರ್ಶಿ ದಿನಕರ್ ಡಿ. ಬಂಗೇರ ಅವರಿಗೆ ಮಾತೃ ವಿಯೋಗ.

Mumbai News Desk

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಮುಂಬೈ : ಪ್ರವೀಣ್ ಭಟ್ ಅವರಿಗೆ ಪಿತೃ ವಿಯೋಗ

Mumbai News Desk

ಕಾಸರಗೋಡಿನಲ್ಲಿ ಕನ್ನಡ ಸಾಂಸ್ಕೃತಿಕ ಉತ್ಸವ ಸಂಪನ್ನ: ಮುಂಬಯಿ ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ ಪ್ರದಾನ

Mumbai News Desk