32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ





ದಹಿಸರ್,  ಡಿ. 4:  ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಸಂಸ್ಥೆ ಶ್ರೀ ಭಾಟ್ಲದೇವಿ ಅಯ್ಯಪ್ಪ ಭಕ್ತವೃಂದ  ಶ್ರೀ ಬಾಟ್ಲಾದೇವಿ ಮಂದಿರ ಭರೂಚ ರೋಡ್ ದಹಿಸರ್ ಪೂರ್ವ ಇದರ 35ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಯ ಕಾರ್ಯಕ್ರಮಗಳೊಂದಿಗೆ ಡಿಸೆಂಬರ್ 7ರಂದು ದೇವಸ್ಥಾನದ ವಠಾರದಲ್ಲಿ ದಿ. ಸಚ್ಚಿದಾನಂದ ಶೆಟ್ಟಿ ಸ್ಮರಣಾರ್ಥ ವೇದಿಕೆಯಲ್ಲಿ ಶ್ರದ್ಧಾಭಕ್ತಿಯೊಂದಿಗೆ ಜರಗಲಿದೆ. 

     ಬೆಳಿಗ್ಗೆ ಗಂಟೆ 6:00 ರಿಂದ ಗಣ ಹೋಮ 7ರಿಂದ ಪ್ರತಿಷ್ಠಾಪನೆ ಬೆಳಿಗ್ಗೆ 10 ರಿಂದ ಹನುಮಾನ್ ಭಜನಾ ಮಂಡಳಿ ಅಶೋಕವನ ದಹಿಸರ್ ಪೂರ್ವ ಇವರಿಂದ ಭಜನೆ ಬಳಿಕ ಅಯ್ಯಪ್ಪ ಸ್ವಾಮಿ ವೃತಧಾರಿಯವರಿಂದ ಭಜನೆ ಮಧ್ಯಾಹ್ನ 12 ಗಂಟೆಯಿಂದ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಯ್ಯಪ್ಪ ಮಹಾಪೂಜೆ ಜರಗಿದ ಬಳಿಕ ಮಹಾಪ್ರಸಾದ ಅನ್ನಸಂತರ್ಪಣೆ ನೆರವೇರುವುದು . ದಹಿಸರ್ ನ  ವಿನಾಯಕ ಗುರುಸ್ವಾಮಿಯವರ ದಿವ್ಯಸ್ತದಿಂದ ಧಾರ್ಮಿಕ ವಿಧಿವತ್ತವಾಗಿ ಜರಗಲಿರುವ ಅಯ್ಯಪ್ಪ ಮಹಾಪೂಜೆಗೆ ಸರ್ವ ಸದ್ಭಕ್ತರು ಆಗಮಿಸಿ ತೀರ್ಥ ಪ್ರಸಾದ ಅನ್ನ ಸಂತರ್ಪಣೆ ಸ್ವೀಕರಿಸಿಸುವಂತೆ ಗೌರವ ಅಧ್ಯಕ್ಷ ಕೃಷ್ಣ ಎಂ ಶೆಟ್ಟಿ ಅಧ್ಯಕ್ಷೆ ಲತಾ ಸಿ ಪೂಜಾರಿ ಗೌರವ ಪ್ರಧಾನ ಕಾರ್ಯದರ್ಶಿ ಮನ್ಮಥ ಆರ್. ಹೆಗ್ಡೆ ಗೌರವ ಕೋಶಾಧಿಕಾರಿ ಉಷಾ ಸಿ ಪೂಜಾರಿ ಉಪಾಧ್ಯಕ್ಷರಾದ ಶ್ರೀಧರ ಕೆ ಪೂಜಾರಿ ಜೊತೆ ಕಾರ್ಯದರ್ಶಿ ರವೀಂದ್ರ ಎಮ್ ಭಟ್ ಜೊತೆ ಕೋಶಾಧಿಕಾರಿ ಸಪ್ನಾ ಪಿ ಶೆಟ್ಟಿ ಕಾನೂನು ಸಲಹೆಗಾರ ಎಚ್ ಎಂ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸದಸ್ಯೆರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

     ಸಾಂಸ್ಕೃತಿಯ ಕಾರ್ಯಕ್ರಮದ ಅಂಗವಾಗಿ ಸಂಜೆ 6:00 ಯಿಂದ ತ್ರಿಶಾ ಸನತ್ ಶೆಟ್ಟಿ ಅವರಿಂದ ಗಣೇಶ ವಂದನ ಕಟೀಲು ದುರ್ಗೆ ದುಂಬಿಯಂತೆ ಓಡಿ ಬಂದಳು ನೃತ್ಯ , ಅಯ್ಯಪ್ಪ ಸ್ತುತಿ ಹರಿವರಸನಂ ಬಳಿಕ ವಿಜಯ ಸಾಲಲ್ಯಾನ್ ತಂಡದವರಿಂದ ಭಜನೆ ಜರಗಲಿದೆ.  ಈ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಸದಾನಂದ ಕೆ ಶೆಟ್ಟಿ ಅವರನ್ನು ಭಕ್ತಾದಿಗಳ ಸಮ್ಮುಖದಲ್ಲಿ ಸನ್ಮಾನಿಸುವ ಕಾರ್ಯ ಜರಗಲಿದೆ.



Related posts

ಎ. 14 ರಂದು ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ  

Mumbai News Desk

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಮೇ 18ರಂದು ಸಾಮೂಹಿಕ ಅಶ್ಲೇಷ ಬಲಿ ಪೂಜೆ

Mumbai News Desk

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk