July 23, 2026
Mumbai News Kannada
ಸುದ್ದಿ

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು








ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66ರ ಗಂಭೀರ ಲೋಪದೋಷಗಳನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಗಮನಕ್ಕೆ ತರಲು ಉಡುಪಿ ಸಂಸದ ಶ್ರೀನಿವಾಸ್ ಕೋಟ ಮತ್ತು ಮಂಗಳೂರು ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವರನ್ನು ಭೇಟಿಯಾಗಿ ಸುಧೀರ್ಘ ವಾಗಿ ಚರ್ಚಿಸಿದರು.
ಕರಾವಳಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಯಿಂದ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುತ್ತಿದ್ದು,, ಮಂಗಳೂರಿನ ನಂತೂರು ಜಂಕ್ಷನ್ ಸೇರಿದಂತೆ ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ, ಕಟಪಾಡಿ , ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ನ ಸಮಸ್ಯೆಗಳ ಪರಿಹಾರಕ್ಕಾಗಿ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿ ಅದ್ಯಯನ ಮಾಡುವಂತ್ತೆ ಕೇಂದ್ರ ಸಚಿವರಲ್ಲಿ ಚರ್ಚೆ ನಡೆಸಿದರು.
ಸಂಸದರ ಮನವಿಗೆ ಸ್ಪಂದಿಸಿದ ಸಚಿವ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ 66ರ ಅಪಘಾತ ಹಾಗೂ ವಾಹನ ಒತ್ತಡಗಳ ಸ್ಥಳವನ್ನು ಪರಿಶೀಲನೆ ನಡೆಸಿ ವಿಡಿಯೋ ರೆಕಾರ್ಡ್ ಮಾಡಿ ವರದಿ ಸಲ್ಲಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸಚಿವರು ಆದೇಶ ನೀಡಿದರು.
ಇದೆ ವೇಳೆ ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ಸಂಸದರುಗಳಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬ್ರಿಜೇಶ್ ಚೌಟರೊಂದಿಗೆ ಲೋಕಸಭಾ ಸದಸ್ಯರಾದ ಬೆಂಗಳೂರು ಗ್ರಾಮಾಂತರ ಸಂಸದ ಮಂಜುನಾಥ ಕೋಲಾರ, ಸಂಸದ ಮಲ್ಲೇಶ್, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ , ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (17/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

Mumbai News Desk

ಭಾಂಡೂಪ್ : ಚಿಕ್ಕು ಅಣ್ಣಪ್ಪ ಪುತ್ರನ್ ನಿಧನ

Mumbai News Desk

ಸಿವಿಲ್ ಇಂಜಿನಿಯರಿಂಗ್ ಸಂಸ್ಥೆಯ ಉಪಾಧ್ಯಕ್ಷರಾಗಿ ಜೀವನ್ ಶೆಟ್ಟಿ ಮುಲ್ಕಿ ಆಯ್ಕೆ

Mumbai News Desk

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ

Mumbai News Desk

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ.

Mumbai News Desk