September 6, 2026
Mumbai News Kannada
ಸುದ್ದಿ

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು






ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66ರ ಗಂಭೀರ ಲೋಪದೋಷಗಳನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಗಮನಕ್ಕೆ ತರಲು ಉಡುಪಿ ಸಂಸದ ಶ್ರೀನಿವಾಸ್ ಕೋಟ ಮತ್ತು ಮಂಗಳೂರು ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವರನ್ನು ಭೇಟಿಯಾಗಿ ಸುಧೀರ್ಘ ವಾಗಿ ಚರ್ಚಿಸಿದರು.
ಕರಾವಳಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಯಿಂದ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುತ್ತಿದ್ದು,, ಮಂಗಳೂರಿನ ನಂತೂರು ಜಂಕ್ಷನ್ ಸೇರಿದಂತೆ ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ, ಕಟಪಾಡಿ , ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ನ ಸಮಸ್ಯೆಗಳ ಪರಿಹಾರಕ್ಕಾಗಿ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿ ಅದ್ಯಯನ ಮಾಡುವಂತ್ತೆ ಕೇಂದ್ರ ಸಚಿವರಲ್ಲಿ ಚರ್ಚೆ ನಡೆಸಿದರು.
ಸಂಸದರ ಮನವಿಗೆ ಸ್ಪಂದಿಸಿದ ಸಚಿವ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ 66ರ ಅಪಘಾತ ಹಾಗೂ ವಾಹನ ಒತ್ತಡಗಳ ಸ್ಥಳವನ್ನು ಪರಿಶೀಲನೆ ನಡೆಸಿ ವಿಡಿಯೋ ರೆಕಾರ್ಡ್ ಮಾಡಿ ವರದಿ ಸಲ್ಲಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸಚಿವರು ಆದೇಶ ನೀಡಿದರು.
ಇದೆ ವೇಳೆ ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ಸಂಸದರುಗಳಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬ್ರಿಜೇಶ್ ಚೌಟರೊಂದಿಗೆ ಲೋಕಸಭಾ ಸದಸ್ಯರಾದ ಬೆಂಗಳೂರು ಗ್ರಾಮಾಂತರ ಸಂಸದ ಮಂಜುನಾಥ ಕೋಲಾರ, ಸಂಸದ ಮಲ್ಲೇಶ್, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ , ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.



Related posts

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

ತಿರುಮಲದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ ಸಂಪನ್ನ: ಮುಂಬೈನ ತಂಡದಿಂದ ಭಕ್ತಿ ಸಮರ್ಪಣೆ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ

Mumbai News Desk