31.6 C
Mumbai
June 7, 2026
Mumbai News Kannada
ಸುದ್ದಿ

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,





ಬೆಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಆದೇಶ ಪ್ರಶ್ನಿಸಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷಮಯೂ‌ರ್ ಉಲ್ಲಾಳ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚಿಗೆ ಈ ಆದೇಶ ಹೊರಡಿಸಿದೆ. ಸಂಘದ 2024-26ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆಗೆ 2024ರ ನವಂಬರ್ 10ರಂದು ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಅಸಿಂಧುಗೊಳಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರು 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಹಾಲಿ ಕಾರ್ಯಕಾರಿ ಸಮಿತಿಯು ಮುಂದುವರಿಯಲಿ ಎಂದು ನವಂಬರ್ 20ರಂದು ಆದೇಶ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.



Related posts

ಶಿರ್ಡಿ ಶ್ರೀ ಸಾಯಿಬಾಬಾ ಸಾನಿಧ್ಯದಲ್ಲಿ ಕಲಾ ಸೌರಭದ ವೈವಿಧ್ಯಮಯ ಬಹುಭಾಷಾ ಸಂಗೀತ ನೃತ್ಯ ಕಲೋತ್ಸವ

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್, ಯಕ್ಷ ಸಂಭ್ರಮ 2023

Mumbai News Desk