30.9 C
Mumbai
June 8, 2026
Mumbai News Kannada
ಸುದ್ದಿ

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ





ದೀನ ದಲಿತರ ಕಣ್ಮಣಿ ಶಿಕ್ಷಣಪ್ರೇಮಿ ದಿ. ದಾಮೋದರ ಸುವರ್ಣ ಅವರ ಜನ್ಮಶತಾಬ್ದಿ ಕಾರ್ಯಕ್ರಮವು ಕುದ್ರೋಳಿಯ ಗೋಕರ್ಣನಾಥ ಸಭಾಂಗಣದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

ಈ ಶುಭವಸರದಲ್ಲಿ “ಬಸವಣ್ಣ ಮತ್ತು ನಾರಾಯಣ ಗುರು ಸಾಮಾಜಿಕ ದರ್ಶನ ಒಂದು ತೌಲನಿಕ ಅಧ್ಯಯನ” ಎಂಬ ಸಂಶೋಧನಾ ಪ್ರಬಂಧದಿಂದ ಗೌರವ ಡಾಕ್ಟರೇಟ್ ಪಡೆದ ಮೋಹನ್ ಬಿ ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ದಿ. ದಾಮೋದರ್ ಸುವರ್ಣ ಅವರ ಸುಪುತ್ರರಾದ ನವೀನ್ ಚಂದ್ರ ಸುವರ್ಣ ಮತ್ತು ಉದಯ ಚಂದ್ರ ಸುವರ್ಣ ಸಹಿತ ಇತರ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ ಗೌರವಿಸಿದರು.
ಮೋಹನ್ ಬಿ ಅವರು ಮುಂಬೈಯಲ್ಲಿದ್ದು ಬಿಲ್ಲವ ಭವನದ ಪ್ರಬಂಧಕರಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ್ದರು. ತವರಿಗೆ ಮರಳಿದ ಅವರು ಪ್ರಬಂಧ ಮಂಡಿಸುವಲ್ಲಿ ಕ್ರಿಯಾಶೀಲರಾದರು. ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನೇಶ್ವರ ಕಾಲೇಜ್ ಮತ್ತು ರಥಬೀದಿಯ ಡಾ. ದಯಾನಂದ್ ಪೈ ಡಾ. ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಪ್ರಸಕ್ತ ಕುಂದಾಪುರದ ಬಂಡರ್ಕಾಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.



Related posts

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ಮೋಹನ್ ಬಿ. ಎಂ. ನಿಧನ

Mumbai News Desk

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk