September 6, 2026
Mumbai News Kannada
ಸುದ್ದಿ

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್





ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ
ಮೃತ ಮಹಿಳೆಯ ಕುಟುಂಬಕ್ಕೆ ಸ್ವತಃ ಅಲ್ಲು ಅರ್ಜುನ್ 25ಲಕ್ಷ ರೂಪಾಯಿ ಪರಿಹಾರ ಘೋಶಿಸಿದ್ದರು, ಇದರ ನಡುವೆ ಇಂದು ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂದಿಸಿದ್ದು ಅಭಿಮಾನಿಗಳು ಶಾಕ್ ಆಗಿದ್ದಾರೆ. ಪುಷ್ಪ 2 ಒಂದೇ ವಾರದಲ್ಲಿ ಸಾವಿರ ಕೋಟಿ ದುಡ್ಡು ಮಾಡಿದ ಪುಷ್ಪ 2 ಸಿನಿಮಾವೇ ಅಲ್ಲು ಅರ್ಜುನ್ ಗೆ ಮುಳುವಾಗಿದೆ.



Related posts

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಅಮೃತ ಭಾರತ ಯೋಜನೆ ಅಡಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ: ಜುಲೈ 17ರಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk