31 C
Mumbai
March 6, 2026
Mumbai News Kannada
ಪ್ರಕಟಣೆ

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ





   ✒️ ಸುದ್ದಿ ವಿವರ :    ಪಿ.ಆರ್.ರವಿಶಂಕರ್ 8483980035

ಬೊಯಿಸರ್ ಪಶ್ಚಿಮದಲ್ಲಿನ ಸಿಡ್ಕೋ ವಲಯದಲ್ಲಿನ (ರೈಲ್ವೇ ಸ್ಟೇಷನ್ ಚಿತ್ರಾಲಯ ರಸ್ತೆ) ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಇದೇ ಬರುವ  ತಾ.18 ನೆಯ ಬುಧವಾರ 2024 ರಂದು ಸಂಜೆ  ಶ್ರೀ ಗಣೇಶ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಯು ವಿದ್ಯುಕ್ತವಾಗಿ ಜರಗಲಿದೆ.

    ಸಂಜೆ 6 ಗಂಟೆಯಿಂದ 8 ರ  ತನಕ ಶ್ರೀ ಜಯಶೀಲ ಗುರುಸ್ವಾಮಿಯವರ  ಉಪಸ್ಥಿತಿಯಲ್ಲಿ ಮೀರಾ ರೋಡ್ ನ ಸುಪ್ರಸಿದ್ಧ ಲಕ್ಶ್ಮೀನಾರಾಯಣ ಭಜನಾ ಮಂಡಲಿಯವರಿಂದ ಭಕ್ತಿ ಭಜನಾ ಕಾರ್ಯಕ್ರಮವಿದೆ.   8 ರಿಂದ 8.30 ರ ತನಕ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ,  8.30 ರಿಂದ 8.45 ರ ತನಕ ಹರಿವರಾಸನಮ್

ಜರಗಲಿದ್ದು ಬಳಿಕ ಪ್ರಸಾದ ರೂಪದಲ್ಲಿ ಅನ್ನದಾನ ಜರಗಲಿದೆ.

   ಸರ್ವ ಭಕ್ತಾದಿಗಳ ಜೀವನದಲ್ಲಿ ಉತ್ತಮ ಆರೋಗ್ಯ , ಸಂತಸ ಹಾಗೂ ಸುಭಿಕ್ಷತೆಯ ಪ್ರಾರ್ಥನೆಗಳೊಂದಿಗೆ ಶ್ರೀ ಗಣೇಶ ಅಯ್ಯಪ್ಪ ಮಂದಿರದ ದಿವ್ಯ ಸನ್ನಿಧಿಯಲ್ಲಿ ಜರಗುವ ಈ ಪವಿತ್ರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾಭಿಮಾನಿಗಳು ಕುಟುಂಬ ಸಮೇತ ಭಾಗವಹಿಸಿ ಕೃಪಾನುಗ್ರಹಿತರಾಗಬೇಕಾಗಿ ಆಯೋಜಕರಾದ ದಯಾನಂದ  ಶೆಟ್ಟಿ ಹಾಗೂ ಸಂತೋಷ ಸ್ವಾಮಿ ( ತುಂಗಾ ಹಾಸ್ಪಿಟಲ್ಸ್) ಇವರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ : ಪಿ.ಆರ್.ರವಿಶಂಕರ್



Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಮಾ. 23,  ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ,  ಸಾಂಸ್ಕೃತಿಕ ವೈಭವ, ನಾಟಕ ಪ್ರದರ್ಶನ

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ

Mumbai News Desk

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ

Mumbai News Desk