September 6, 2026
Mumbai News Kannada
ಕ್ರೀಡೆ

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,





ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿ ತೊಡಗಿ ಕೊಂಡಾಗ ಬದುಕು ರೂಪಿಸಲು ಸುಗಮ : ಅಜಿತ್ ರೈ

ಮೀರಾ – ಭಾಯಂದರ್ ನ ಸಮಾಜ ಸೇವಕ, ಶಿಕ್ಷಣ ಪ್ರೇಮಿ ಡಾ. ಅರುಣೋದಯ ಎಸ್ ರೈ ಅವರು ಸ್ಥಾಪಿಸಿದರೈ ಸುಮತಿ ಎಜುಕೇಷನಲ್ ಟ್ರಸ್ಟ್ ನಡೆಸುತ್ತಿರುವ ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟವು ಡಿ13 ರಂದು ಆದರ್ಶ ವಿದ್ಯಾನಿಕೇತನ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಕಾಶಿಗಾಂವ್‌ನ ಪೊಲೀಸ್ ಠಾಣೆಯ ಸೀನಿಯರ್ ಇನ್ಸ್‌ಪೆಕ್ಟರ್ ಮಹೇಶ್ ತೊಗರವಾಡ್,ಮತ್ತು ಯುನೈಟೆಡ್ ರಬ್ಬರ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಅಜಿತ್ ರೈ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.ಡಾ. ಅರುಣೋದಯ ಎಸ್ ರೈ ಮತ್ತು ಲಕ್ಷ್ಮಿ ಯಾದವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡಿದರು.

ಸೀನಿಯರ್ ಇನ್ಸ್‌ಪೆಕ್ಟರ ಮಹೇಶ್ ತೊಗರವಾಡ್ ಮಾತನಾಡುತ್ತಾ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಕ್ರೀಡೆಯ ಮುಖ್ಯವಾಗಿದೆ . ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಗೌರವ ಅತಿಥಿ ಅಜಿತ್ ರೈ ಅವರು ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ, ಮುಂದಿನ ವೃತ್ತಿಜೀವನದ ಬೆಳವಣಿಗೆಗೆ ಕ್ರೀಡೆಯು ಸಹಾಯವಾಗುತ್ತದೆ . ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿ ತೊಡಗಿ ಕೊಂಡಾಗ ಬದುಕು ರೂಪಿಸಲು ಸುಗಮವಾಗುತ್ತದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಸ್ವರ್ಣಲತಾ ಅರುಣೋದಯ ರೈ, ಪುತ್ರ ಜೈಕಿರಣ್ ರೈ, ಕಾವ್ಯ ರೈ, ಪುತ್ರಿ ಡಾ. ಸ್ವರೂಪ್ ಶೆಟ್ಟಿ, ಚೇತನ್ ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾಕೂಟ ಸುಗಮವಾಗಿ ನಡೆಸಲು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು . ಸಿಬ್ಬಂದಿ ಮತ್ತು ಸ್ವಯಂಸೇವಕರು ಅವಿರತವಾಗಿ ಶ್ರಮಿಸಿದರು,ಕ್ರೀಡಾಕೂಟವು ಹಲವಾರು ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ಗಳನ್ನು ಒಳಗೊಂಡಿತ್ತು,ವಾರ್ಷಿಕ ಕ್ರೀಡಾ ಕೂಟ 2024-2025 ಅದ್ಭುತ ಯಶಸ್ಸನ್ನು ಕಂಡಿತು, ವಿದ್ಯಾರ್ಥಿಗಳಲ್ಲಿ ತಂಡದ ಕೆಲಸ, ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ಬೆಳೆಸಿತು.



Related posts

ಸಿದ್ಧಕಟ್ಟೆ: ಕೊಡಂಗೆ ವೀರವಿಕ್ರಮ ಜೋಡುಕರೆ ಕಂಬಳ :166 ಜೋಡಿ ಭಾಗಿ

Mumbai News Desk

ಅಹಮದಾಬಾದ್‌ನಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಭಾರತ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ, ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2025

Mumbai News Desk

ನೇಪಾಳದಲ್ಲಿ ಜರಗಿದ ಏಷಿಯನ್ ಥಾಯ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆದ ಜಾನ್ವಿ ಮನೋಜ್ ಕೋಟ್ಯಾನ್

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್   ಲೀಗ್ ಕ್ರಿಕೆಟ್ ಟೂರ್ನಮೆಂಟ್ ಆರಂಭ.

Mumbai News Desk

ಉದಯ ಶೆಟ್ಟಿ ನೇತೃತ್ವದಲ್ಲಿ ಹರಿಯಾಣದಲ್ಲಿ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್

Mumbai News Desk