September 6, 2026
Mumbai News Kannada
ಮುಂಬಯಿ

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,





ಮುಂಬಯಿ, ಡಿ.19. ಉಪನಗರ ಸಾಂತಾಕ್ರೂಸ್ (ಪ.)ನ ಮಿಲನ್‌ ಸಬ್‌ವೇ ರೋಡ್, ಆಶಾ ಚಾಳ್‌ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ನ ಆಡಳಿತದಲ್ಲಿ ಇರುವ ಶ್ರೀಮಂತ್ರ ದೇವಿ ಕ್ಷೇತ್ರದ ವಾರ್ಷಿಕ ಮಹಾಪೂಜೆಯು ಡಿ17. ಮಂಗಳವಾರದಂದು ಬೆಳಿಗ್ಗೆಯಿಂದ ಸಂಜೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ , ದೇವಿ ಆವೇಶದ ಸೇವೆಯೊಂದಿಗೆ ಭಕ್ತಿ ಸಂಭ್ರಮದೊಂದಿಗೆ ನಡೆಯಿತು,.

ಅಂದು ಶ್ರೀದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮ- ಹವನ, ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು.

ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು,
ಕ್ಷೇತ್ರದ ಧಾನಿಗಳನ್ನು ,ವಿಶೇಷ ಅತಿಥಿಗಳನ್ನು ಮೊತ್ತೇಸರರಾದ ವಾಸುದೇವ ಬಂಜನ್ (ಅರ್ಚಕರು), ಅಧ್ಯಕ್ಷರು, ಟ್ರಸ್ಟಿ, ಮಧ್ಯಸ್ಥರು, ಕಾರ್ಯಕಾರಿ ಸಮಿತಿದರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದರು.
ಈ ಸಂಧರ್ಭದಲ್ಲಿ ದೇವಸ್ಥಾನದಲ್ಲಿ ಸುದೀರ್ಘ ಕಾಲದಿಂದ ಸಕ್ಸೋ ಫೋನ್, ಚಂಡೆ ಮದ್ದಳೆ ವಾದನದ ಸೇವೆ ಕಾರ್ಯವನ್ನು ನೀಡುತ್ತಿರುವ ದಿನೇಶ್ ಕೋಟ್ಯಾನ್ ಜೇರಿ ಮೇರಿ ಇವರಿಗೆ ಬಂಗಾರದ ಪದಕ ದೊಂದಿಗೆ ಮಹಾಪ್ರಸಾದವನ್ನು ನೀಡಿ ಗೌರವಿಸಲಾಯಿತು.



Related posts

ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ  ಸ್ನೇಹ ಸಮ್ಮಿಲನ, ಸಾಂಸ್ಕೃತಿಕ ವೈಭವ,

Mumbai News Desk

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ: ಮುಂಬೈ ಮತ್ತು ಕೊಂಕಣ ಭಾಗದಲ್ಲಿ ರೆಡ್ ಅಲರ್ಟ್, ಅಸ್ತವ್ಯಸ್ತಗೊಂಡ ಜನಜೀವನ

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

ಜಾನ್ಹವಿ ಶೆಟ್ಟಿಗೆ ಶೇ.86.40 ಅಂಕ.

Mumbai News Desk

ಕರುನಾಡ ಸಿರಿ ವಾರ್ಷಿಕ ಕ್ರೀಡಾಕೂಟ ಯಶಸ್ವಿ ಸಂಪನ್ನ.

Mumbai News Desk