28.4 C
Mumbai
March 7, 2026
Mumbai News Kannada
ಮುಂಬಯಿ

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,





ಮುಂಬಯಿ, ಡಿ.19. ಉಪನಗರ ಸಾಂತಾಕ್ರೂಸ್ (ಪ.)ನ ಮಿಲನ್‌ ಸಬ್‌ವೇ ರೋಡ್, ಆಶಾ ಚಾಳ್‌ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ನ ಆಡಳಿತದಲ್ಲಿ ಇರುವ ಶ್ರೀಮಂತ್ರ ದೇವಿ ಕ್ಷೇತ್ರದ ವಾರ್ಷಿಕ ಮಹಾಪೂಜೆಯು ಡಿ17. ಮಂಗಳವಾರದಂದು ಬೆಳಿಗ್ಗೆಯಿಂದ ಸಂಜೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ , ದೇವಿ ಆವೇಶದ ಸೇವೆಯೊಂದಿಗೆ ಭಕ್ತಿ ಸಂಭ್ರಮದೊಂದಿಗೆ ನಡೆಯಿತು,.

ಅಂದು ಶ್ರೀದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮ- ಹವನ, ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು.

ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು,
ಕ್ಷೇತ್ರದ ಧಾನಿಗಳನ್ನು ,ವಿಶೇಷ ಅತಿಥಿಗಳನ್ನು ಮೊತ್ತೇಸರರಾದ ವಾಸುದೇವ ಬಂಜನ್ (ಅರ್ಚಕರು), ಅಧ್ಯಕ್ಷರು, ಟ್ರಸ್ಟಿ, ಮಧ್ಯಸ್ಥರು, ಕಾರ್ಯಕಾರಿ ಸಮಿತಿದರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದರು.
ಈ ಸಂಧರ್ಭದಲ್ಲಿ ದೇವಸ್ಥಾನದಲ್ಲಿ ಸುದೀರ್ಘ ಕಾಲದಿಂದ ಸಕ್ಸೋ ಫೋನ್, ಚಂಡೆ ಮದ್ದಳೆ ವಾದನದ ಸೇವೆ ಕಾರ್ಯವನ್ನು ನೀಡುತ್ತಿರುವ ದಿನೇಶ್ ಕೋಟ್ಯಾನ್ ಜೇರಿ ಮೇರಿ ಇವರಿಗೆ ಬಂಗಾರದ ಪದಕ ದೊಂದಿಗೆ ಮಹಾಪ್ರಸಾದವನ್ನು ನೀಡಿ ಗೌರವಿಸಲಾಯಿತು.



Related posts

ವಸಯಿ ತಾಲೂಕ ಮೊಗವೀರ ಸಂಘ – ವಿಶ್ವ ಮಹಿಳಾ ದಿನಾಚರಣೆ

Mumbai News Desk

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ವತಿಯಿಂದ ವಿದ್ಯಾರ್ಥಿ ವೇತನ, ದತ್ತು ಸ್ವಿಕಾರ, ‘ದಿಶಾ’ ಯಕ್ಷಗಾನ ಪ್ರದರ್ಶನ.

Mumbai News Desk

ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿಯ 15ನೇ ವರ್ಷದ ಸಂಭ್ರಮ

Mumbai News Desk

ಭಾರತ್ ಬ್ಯಾಂಕ್, ಬೊಯಿಸರ್ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ ಉತ್ಸಾಹಭರಿತವಾಗಿ ಆಚರಣೆ

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಮಲಾಡ್ ಕನ್ನಡ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk