30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ರೋಡ್ : ಡಿ. 22ರಂದು 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ





ಮೀರಾ ರೋಡ್ ಪೂರ್ವ ಭಾರತಿ ಪಾರ್ಕ್ ಬಳಿಯ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ ಡಿ. 22ರ, ಆದಿತ್ಯವಾರ, ಶ್ರೀ ಲಕ್ಷ್ಮಿ ನಾರಾಯಣ ಭಜನಾ ಸಮಿತಿಯ ಸಂಚಾಲಕತ್ವದ ಶ್ರೀ ಲಕ್ಷ್ಮಿನಾರಾಯಣ ಭಜನಾ ಮಂದಿರದಲ್ಲಿ ಜರಗಲಿದೆ.
ಕಾರ್ಯಕ್ರಮ :
ಅಂದು ಬೆಳಿಗ್ಗೆ ಆರು ಗಂಟೆಗೆ ಪುರೋಹಿತರಾದ ಸಾಣೂರು ಸಾತಿಂಜ ಜನಾರ್ದನ್ ಭಟ್ ಅವರ ಪೌರೋಹಿತ್ಯದಲ್ಲಿ ಗಣ ಹೋಮ, 9:30 ರಿಂದ ಶ್ರೀ ಲಕ್ಷ್ಮಿನಾರಾಯಣ ಭಜನಾ ಸಮಿತಿಯ ಸದಸ್ಯರಿಂದ ಭಜನೆ, 11.30ಕ್ಕೆ ಅರ್ಚನೆ, 12 ಮಧ್ಯಾಹ್ನ ಗಂಟೆಗೆ ಪಡಿಪೂಜೆ, 12.30ಕ್ಕೆ ಮಹಾ ಮಂಗಳಾರತಿ, ಗಂಟೆ ಒಂದರಿಂದ ತೀರ್ಥ- ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ.
ಸಂಜೆ 6 ಗಂಟೆಯಿಂದ ಬ್ರಹ್ಮ ಬಾಲಾಂಡಿ ತುಳು ಯಕ್ಷಗಾನ – ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಕಲಾಮಿತ್ರ ಮಂಡಳಿ ಸಾಕಿನಾಕ ಇದರ ಕಲಾವಿದರಿಂದ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಅಯ್ಯಪ್ಪ ಮಹಾಪೂಜೆಯಲ್ಲಿ ಭಾಗವಹಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಏರ್ಮಾಳ್ ಬಡ ಜಯಶೀಲ ಬಿ ತಿಂಗಳಾಯ ಗುರುಸ್ವಾಮಿ, ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಮಿತಿ ಸದಸ್ಯರು, ಮತ್ತು ಶ್ರೀ ಲಕ್ಷ್ಮಿ ನಾರಾಯಣ ಭಜನಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಿತಿ ಸದಸ್ಯರು ವಿನಂತಿಸಿದ್ದಾರೆ.



Related posts

ವಿದ್ಯಾವಿಹಾರ್: ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ದೇವಸ್ಥಾನ,ಫೆ. 1ರಂದು ಇಪ್ಪತ್ನಾಲ್ಕು ಕಂತುಗಳ ಶ್ರೀರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ

Mumbai News Desk

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.

Mumbai News Desk

ಶ್ರೀ ಕ್ಷೇತ್ರ ಕಾಂತವರ : ಜ. 14ರಿಂದ ವರ್ಷಾವಧಿ ಜಾತ್ರೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ವತಿಯಿಂದ ನಾಡಹಬ್ಬ ಸಂಭ್ರಮಕ್ಕೆ ಅದ್ಧೂರಿ ಸಿದ್ಧತೆ: ನ. 9ರಂದು ಸಮೂಹ ಗಾಯನ, ನೃತ್ಯ ವೈಭವ ಮತ್ತು ಹಾಸ್ಯ ಕವಿಗೋಷ್ಠಿ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಸೆ. 29 ರಂದು 36ನೇ ವಾರ್ಷಿಕ ಮಹಾಸಭೆ

Mumbai News Desk

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk