30.9 C
Mumbai
June 8, 2026
Mumbai News Kannada
ತುಳುನಾಡು

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ





ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿ ದ್ದು ಕಂಬಳ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು
ಮುಲ್ಕಿ ಸೀಮೆಯ ಅರಸು ಕಂಬಳದ ವೇದಿಕೆಯಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಸರಕಾರವು 24 ಕಂಬಳಗಳಿಗೆ 5 ಲಕ್ಷ ರೂ. ಅನುದಾನ ಮಂಜೂರು ಮಾಡಿದಕ್ಕೆ ಧನ್ಯವಾದ ಸಲ್ಲಿಸುತ್ತಾ, ಕಂಬಳಗಳಿಗೆ ಭಾರತ ಸರಕಾರದ ಮಾನ್ಯತೆ ಪಡೆಯಲು ಸಂಸದರ ಮೂಲಕ ಪ್ರಯತ್ನ ನಡೆಸಲಾಗುವುದು.ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದರು.
ವೇದಿಕೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಕೆ., ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಮಿಥುನ್,ರೈ, ಭಾರತ್ ಬ್ಯಾಂಕ್‌ ನ ಕಾರ್ಯಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಗುಣಪಾಲ ಕಡಂಬ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಗದೀಶ್ ಅಧಿಕಾರಿ, ಸುಚರಿತ ಶೆಟ್ಟಿ, ಗುರುರಾಜ್ ಎಸ್. ಪೂಜಾರಿ, ಲೋಕೇಶ್ ಮುಚೂರು, ಶರತ್ ಸಾಲ್ಯಾನ್, ಯೋಗೀಶ್ ಜೆಪ್ಪು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರವಿ ಶೆಟ್ಟಿ ಕತಾರ್, ರತ್ನಾಕರ ಜೈನ್, ಐಕಳ ಕಂಬಳ ಸಮಿತಿಯ ಚಿತ್ತರಂಜನ್ ಭಂಡಾರಿ, ಸುಗಂಧಿ ದಿನೇಶ್ ಕೊಂಡಾಣ, ಉದ್ಯಮಿ ಆಸ್ಟಿನ್ ಸಂತೋಷ್, ಪದ್ಮರಾಜ್ ಪೂಜಾರಿ ಮಂಗಳೂರು, ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಶ್ಯಾಮ್ ಪ್ರಸಾದ್, ಕಿಶೋರ್ ಶೆಟ್ಟಿ ದೆಪ್ಪಾಣಿಗುತ್ತು, ವಿನೋದ್‌ ಸಾಲ್ಯಾನ್ ಬೆಳ್ಳಾಯರು, ಪ್ರೇಮಲತಾ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು

ಸಮಿತಿಯ ನವೀನ್ ಶೆಟ್ಟಿ ಎಡ್ಡೆಮಾರ್ ನಿರೂಪಿಸಿದರು.
‘ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ರವಿಶೆಟ್ಟಿ ಮೂಡಂಬೈಲು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಗುತ್ತಿನಾರ್ ರವೀಂದ್ರ ಶೆಟ್ಟಿ ಬಳ್ಳುಂಜೆಗುತ್ತು, ರೊನಾಲ್ಡ್ ಫೆರ್ನಾಂಡಿಸ್‌ರನ್ನು ಗೌರವಿಸಲಾಯಿತು.



Related posts

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ಭಯ-ಭಕ್ತಿಯ ರೋಮಾಂಚನ: ಕಣ್ಮನ ಸೆಳೆದ ಕಾಪುವಿನ ಇತಿಹಾಸ ಪ್ರಸಿದ್ಧ ಪಿಲಿಕೋಲ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk