September 6, 2026
Mumbai News Kannada
ಪ್ರಕಟಣೆ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.





ಬೊಯಿಸರ್ :   ಇದೇ ಡಿಸೆಂಬರ್ ತಾ. 27 ನೆಯ ಶುಕ್ರವಾರದಂದು ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿಯ  ಸಂತಶ್ರೇಷ್ಟ ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ  14 ನೆಯ ವರ್ಷದ ಪ್ರತಿಷ್ಟಾಪನಾ ಉತ್ಸವವು ಜರಗಲಿದೆ.

ಪ್ರಾತಃ ಕಾಲದ 6 ಗಂಟೆಗೆ ಸಂಕಲ್ಪ ಪೂಜೆ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 8 ಗಂಟೆಗೆ  ನಿತ್ಯಾನಂದ ಬಾಬಾ ಪಂಚಾಮೃತ ಅಭಿಷೇಕ ಮತ್ತು ಪ್ರಾತಃ ಆರತಿಯು ಸರ್ವ ಭಕ್ತಾಭಿಮಾನಿಗಳ ಭಾಗವಹಿಸುವಿಕೆಯಲ್ಲಿ ಜರಗಲಿದೆ.

ಬೆಳಿಗ್ಗೆ 10 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಸದ್ಗುರು ನಿತ್ಯಾನಂದ ಭಜನಾ ಮಂಡಳಿಯವರಿಂದ ಭಕ್ತಿಗೀತೆ ಹಾಗೂ ಭಜನಾ ಕಾರ್ಯಕ್ರಮವಿರುತ್ತದೆ. 12 ಗಂಟೆಗೆ ಮದ್ಯಾಹ್ನದ ಆರತಿಯ ಬಳಿಕ ಅನ್ನಸಂತರ್ಪಣೆ ಜರಗಲಿದೆ.

ಸಂಜೆ 6 ಗಂಟೆಗೆ ನಿತ್ಯಾನಂದ ಬಾಬಾ ಇವರ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆ ಇದ್ದು ಸಂಜೆ 8 ಗಂಟೆಯ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ.

              ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವ  ಪೂರ್ಣ ದಿನದ ಈ  ಪ್ರತಿಷ್ಟಾಪನೋತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ಸಹ ಕುಟುಂಬ ಬಂದು ಭಾಗವಹಿಸಬೇಕಾಗಿ ಶ್ರೀಮತಿ ಸುಹಾಸಿನಿ ದಾಮೋದರ್ ನಾಯ್ಕ್ ಹಾಗೂ ವಿಶ್ವಸ್ಥ ಮಂಡಳಿಯವರು ಸಮಸ್ಥ ಭಕ್ತಮಂಡಳಿಯ ಪರವಾಗಿ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ :ಪಿ.ಆರ್.ರವಿಶಂಕರ್

    8483980035



Related posts

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಡಿ.9 ರಂದು ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ ಕಾಂದಿವಲ ಇದರ ವತಿಯಿಂದ 49ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಮಹೋತ್ಸವ 

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk