July 22, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿ. ಹೊಸ ವರ್ಷದ ಗುರುಪೂಜೆ.







.

.

ಮುಂಬಯಿ, ಜ. 4: ಬಿಲ್ಲವರ ಅಸೋಸಿಯೇಷನಿನ ಭಾಯಿಂದರ್ ಸ್ಥಳೀಯ ಕಚೇರಿಯಲ್ಲಿ ನೂತನ ಕಾರ್ಯಕಾರೀ ಸಮಿತಿಯ ಮುಂದಾಳತ್ವದಲ್ಲಿ ಹೊಸ ವರುಷದ ಮೊದಲ ಗುರುವಾರದ ಗುರುಪೂಜೆಯು ವಿಜ್ರಂಭಣೆಯಿಂದ ಜರಗಿತು. ಸುಮಾರು 55 ಗುರು ಭಕ್ತರು ಗುರುಪೂಜೆ ನೀಡಿ ಸಹಕರಿಸಿದ್ದರು.ಆರಂಭದಲ್ಲಿ ಸದಸ್ಯರಿಂದ ಭಜನೆ ನಡೆದು ಫೋರ್ಟ್ ವೆಸ್ಟರ್ನ್ ಇಂಡಿಯಾ ಶನಿ ಮಹಾತ್ಮಾ ಪೂಜಾ ಸಮಿತಿಯ ಪ್ರಧಾನ ಅರ್ಚಕ ಸತೀಶ್ ಕೋಟ್ಯಾನ್ ರವರಿಂದ ಗುರುಪೂಜೆ, ಮಹಾ ಆರತಿ ನಡೆಯಿತು. ಕಚೇರಿಯ ಅರ್ಚಕ ರಾಕೇಶ್ ಅಮೀನ್ ಸಹಕರಿಸಿದ್ದರು.


ಈ ಸಂದರ್ಭದಲ್ಲಿ ಸತೀಶ್ ಕೋಟ್ಯಾನ್ ರವರು ಗುರುಸಂದೇಶದ ಬಗ್ಗೆ ವಿವರಿಸಿ ಹಿತವಚನ ನೀಡಿದರು. ಕೊನೆಯಲ್ಲಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಗುರುಭಕ್ತರು ಉಪಸ್ಥಿತರಿದ್ದರು.ಸ್ಥಳೀಯ ಕಚೇರಿಯ ಕಾರ್ಯಾದ್ಯಕ್ಷ ಶೇಕರ ರಾಮ ಪೂಜಾರಿ, ಗೌ.ಕಾರ್ಯದರ್ಶಿ ಜ್ಯೋತಿ ರತ್ನಾಕರ ಪೂಜಾರಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಸಮಿತಿಯ ಅಭಿಮಾನಿಗಳು ಪೂಜಾಕಾರ್ಯ ಯಶಸ್ಸಿಗೆ ಸಹಕರಿಸಿದ್ದರು.

.



Related posts

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಗೊರೆಗಾಂವ್ ಪೂರ್ವ ನಿತ್ಯಾನಂದ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

Mumbai News Desk

ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವಕ್ಕೆ ಚಾಲನೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರಿಗೆ ರಜತ ಪೀಠ ಸಮರ್ಪಣೆ

Mumbai News Desk