30.9 C
Mumbai
June 8, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿ. ಹೊಸ ವರ್ಷದ ಗುರುಪೂಜೆ.





.

.

ಮುಂಬಯಿ, ಜ. 4: ಬಿಲ್ಲವರ ಅಸೋಸಿಯೇಷನಿನ ಭಾಯಿಂದರ್ ಸ್ಥಳೀಯ ಕಚೇರಿಯಲ್ಲಿ ನೂತನ ಕಾರ್ಯಕಾರೀ ಸಮಿತಿಯ ಮುಂದಾಳತ್ವದಲ್ಲಿ ಹೊಸ ವರುಷದ ಮೊದಲ ಗುರುವಾರದ ಗುರುಪೂಜೆಯು ವಿಜ್ರಂಭಣೆಯಿಂದ ಜರಗಿತು. ಸುಮಾರು 55 ಗುರು ಭಕ್ತರು ಗುರುಪೂಜೆ ನೀಡಿ ಸಹಕರಿಸಿದ್ದರು.ಆರಂಭದಲ್ಲಿ ಸದಸ್ಯರಿಂದ ಭಜನೆ ನಡೆದು ಫೋರ್ಟ್ ವೆಸ್ಟರ್ನ್ ಇಂಡಿಯಾ ಶನಿ ಮಹಾತ್ಮಾ ಪೂಜಾ ಸಮಿತಿಯ ಪ್ರಧಾನ ಅರ್ಚಕ ಸತೀಶ್ ಕೋಟ್ಯಾನ್ ರವರಿಂದ ಗುರುಪೂಜೆ, ಮಹಾ ಆರತಿ ನಡೆಯಿತು. ಕಚೇರಿಯ ಅರ್ಚಕ ರಾಕೇಶ್ ಅಮೀನ್ ಸಹಕರಿಸಿದ್ದರು.


ಈ ಸಂದರ್ಭದಲ್ಲಿ ಸತೀಶ್ ಕೋಟ್ಯಾನ್ ರವರು ಗುರುಸಂದೇಶದ ಬಗ್ಗೆ ವಿವರಿಸಿ ಹಿತವಚನ ನೀಡಿದರು. ಕೊನೆಯಲ್ಲಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಗುರುಭಕ್ತರು ಉಪಸ್ಥಿತರಿದ್ದರು.ಸ್ಥಳೀಯ ಕಚೇರಿಯ ಕಾರ್ಯಾದ್ಯಕ್ಷ ಶೇಕರ ರಾಮ ಪೂಜಾರಿ, ಗೌ.ಕಾರ್ಯದರ್ಶಿ ಜ್ಯೋತಿ ರತ್ನಾಕರ ಪೂಜಾರಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಸಮಿತಿಯ ಅಭಿಮಾನಿಗಳು ಪೂಜಾಕಾರ್ಯ ಯಶಸ್ಸಿಗೆ ಸಹಕರಿಸಿದ್ದರು.

.



Related posts

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ : ಸೀರೆ, ವಜ್ರಾಭರಣ ಹಾಗೂ ಇನ್ನಿತರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ,

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್‌ ನಿಂದಟೀಮ್ ಮುಷಕ್‌ಗೆ ರೂ. 2 ಎರಡು ಲಕ್ಷ ದೇಣಿಗೆ

Mumbai News Desk

ಎಲ್ಲರ ಬದುಕಲ್ಲಿ ಧರ್ಮ ಕಾರ್ಯಗಳು ನಡೆಯಲಿ: ಸಾಣೂರು ಸಾಂತಿಂಜ ಜನಾರ್ದನ ಭಟ್‌

Mumbai News Desk

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್, ಇದರ 16ನೇ ವರ್ಷದ ವಾರ್ಷಿಕ  ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಕುಲಾಲ ಸಂಘ ಮುಂಬಯಿ ನವರಾತ್ರಿ ಉತ್ಸವ.ದುರ್ಗಾ ಪೂಜೆ, ಗರ್ಬಾ ನೃತ್ಯ

Mumbai News Desk