28.4 C
Mumbai
March 7, 2026
Mumbai News Kannada
ಮುಂಬಯಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಸಮಾಜ ಕಲ್ಯಾಣ ಸಹಾಯಹಸ್ತ





.

.

ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ: ಐಕಳ ಹರೀಶ್ ಶೆಟ್ಟಿ

*ಸಮಾಜಕಲ್ಯಾಣ ಸಹಾಯಧನ ವಿತರಣೆ*

ಮಂಗಳೂರು ಜ 4. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ.  ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.

 ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕವಾಗಿ ಮಾತನಾಡಿ 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಯಿತು ಎಂದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ ಒಕ್ಕೂಟಕ್ಕೆ ಯಾರೇ ಅರ್ಜಿ ಸಲ್ಲಿಸಿದರೂ ಅರ್ಜಿಯನ್ನು ತಿರಸ್ಕರಿಸದೆ ಪರಿಶೀಲಿಸಿ ನೆರವನ್ನು ನೀಡಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಟ್ರೇಲಿಯದ  ಉದ್ಯಮಿ ದಯಾನಂದ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಸಮಾರಂಭದಲ್ಲಿ ಚಂದ್ರಹಾಸ ಶೆಟ್ಟಿ,  ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು,  ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ, ಸುಧಾಕರ  ಪೂಂಜ ಸುರತ್ಕಲ್,  ಹರ್ಷಕುಮಾರ್ ರೈ, ಗೀತಾ ರೈ, ಕೊಲ್ಲಾಡಿ ಬಾಲಕೃಷ್ಣ ರೈ ಉಪಸ್ಥಿತರಿದ್ದರು. ಉದಯಕುಮಾರ್ ಪ್ರಾರ್ಥನೆಗೈದರು. ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ ವಂದಿಸಿದರು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀತಮ್ ಮೋಹನ್ ಬಂಗೇರ ಗೆ ಶೇ 88 ಅಂಕ.

Mumbai News Desk

ತುಳು ಸಂಘ ಬೊರಿವಲಿ, 14ನೇ ವಾರ್ಷಿಕ ಮಹಾಸಭೆ, ನೂತನ ಅಧ್ಯಕ್ಷರಾಗಿ ಹರೀಶ್ ಮೈಂದನ್

Mumbai News Desk

ತುಳು ವೆಲ್‌ಫೇರ್ ಅಸೋಸಿಯೇಶನ್‌ನ ಮಹಿಳಾ ವಿಭಾಗದಿಂದ ಹಳದಿ ಕುಂಕುಮ

Mumbai News Desk

ಕರ್ನಾಟಕ ಸಂಘ ಕಲ್ಯಾಣ್, ವಾರ್ಷಿಕ ಮಹಾ ಸಭೆ : ಹಾಗೂ ನೂತನ ಪದಾಧಿಕಾರಿಗಳ ನಿಯುಕ್ತಿ, ಅಧ್ಯಕ್ಷರಾಗಿ ಜಯಂತ್ ದೇಶಮುಖ್

Mumbai News Desk

ಪ್ರಣವ್ ಬಿ.ಕೋಟ್ಯಾನ್ ಗೆ ಶೇ. 95.60 ಅಂಕ.

Mumbai News Desk

ಕನ್ನಡ ಸಂಘ ಸಯನ್ ನ ಆಯೋಜನೆಯಲ್ಲಿ ಸರಣಿ ತಾಳಮದ್ದಳೆ ಕಾರ್ಯಕ್ರಮಕ್ಕೆ ಚಾಲನೆ

Mumbai News Desk