30 C
Mumbai
April 24, 2026
Mumbai News Kannada
ಪ್ರಕಟಣೆ

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

ಮುಂಬಯಿ ಮಹಾನಗರ ಮತ್ತು ಉಪನಗರಗಳಲ್ಲಿ ನೆಲೆಸಿರುವ ಬೈಂದೂರು – ಕುಂದಾಪುರ ಬಿಲ್ಲವರ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಸಮುದಾಯ ಬಾಂಧವರ ಚಿಂತನೆಗಳನ್ನು ಹಂಚಿಕೊಳ್ಳಲು ನಿಸ್ವಾರ್ಥ ಮನೋಭಾವದ ಸಮಾನ ಮನಸ್ಕ ಬಿಲ್ಲವ ಸಮುದಾಯ ಬಾಂಧವರು ಒಂದೆಡೆ ಸೇರಿ ತಮ್ಮ ಆತ್ಮಾಭಿಮಾನದ ಪ್ರತೀಕ ಎಂಬಂತೆ ಯಾವುದೇ ಪ್ರತಿಫಲಾಪೇಕ್ಷೆ ಬಯಸದ ಸ್ವಾಭಿಮಾನಿ ಬಿಲ್ಲವರ ತಂಡವು ಸಮುದಾಯದ ಸೇವೆ ಮಾಡುವ ಸದುದ್ದೇಶದಿಂದ ಬೈಂದೂರು-ಕುಂದಾಪುರ ಬಿಲ್ಲವರು ಮುಂಬಯಿ ಎಂಬ ನಾಮಧೇಯದಲ್ಲಿ ಸಮುದಾಯದ ಸೇವೆಗೆಂದೆ ಕಾರ್ಯ ನಿರತರಾಗಿದ್ದು ಆ ನಿಟ್ಟಿನಲ್ಲಿ ಮುಂಬಯಿ ಮಹಾನಗರ ಮತ್ತು ಉಪನಗರಗಳಲ್ಲಿ ನೆಲೆಸಿರುವ ಬೈಂದೂರು-ಕುಂದಾಪುರ ಬಿಲ್ಲವರಿಗಾಗಿ ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮವನ್ನು ಜನವರಿ 19 ರಂದು ರವಿವಾರ ಅಪರಾಹ್ನ ಗಂಟೆ 3-00 ರಿಂದ ಮೋತಿಲಾಲ್ ಹರಗೋವಿಂದ ದಾಸ್ ವಿದ್ಯಾಲಯ ಸಭಾಂಗಣ (ಎಮ್. ಹೆಚ್. ಹೈಸ್ಕೂಲ್), ಪ್ರಥಮ ಮಹಡಿ, ಶಿವಾಜಿ ಪಥ್, ಥಾಣೆ (ಪಶ್ಚಿಮ) ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಂಬಯಿ ಹೈಕೋರ್ಟ್ ನ್ಯಾಯವಾದಿ ಶಕುಂತಲಾ ಎ. ಪೂಜಾರಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದು ಮುಂಬಯಿ ಹೈಕೋರ್ಟ್ ನ್ಯಾಯವಾದಿ ಆನಂದ ಎಮ್. ಪೂಜಾರಿ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವಾರು ವರ್ಷಗಳಿಂದ ಸಮುದಾಯ ಸೇವೆ ಸಲ್ಲಿಸುತ್ತಾ ಬಂದಿರುವ ಎನ್. ಜಿ. ಪೂಜಾರಿ, ನರಸಿಂಹ ಎಮ್. ಬಿಲ್ಲವ ಹಾಗೂ ಹಿರಿಯ ಸಮುದಾಯ ಬಾಂಧವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಜರಗಲಿದೆ.
ಆ ಪ್ರಯುಕ್ತ ಮುಂಬಯಿ ಮಹಾನಗರ ಮತ್ತು ಉಪನಗರಗಳಲ್ಲಿ ನೆಲೆಸಿರುವ ಬೈಂದೂರು – ಕುಂದಾಪುರ ಬಿಲ್ಲವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸುವುದರೊಂದಿಗೆ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ನಂಬರ್‌ಗಳಿಗೆ ಕರೆ ಮಾಡಬಹುದೆಂದು 9869071413 /9867811733/9820718785 /9820463761 ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.

Mumbai News Desk

ಜ.21 ರಂದು ವಸಾಯಿ ತಾಲೂಕು ಮೊಗವೀರ ಸಂಘ, ತುಳು-ಕನ್ನಡಿಗರಿಗಾಗಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk