32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.


ಘಾಟ್ಕೋಪರ್ ಪಶ್ಚಿಮ ಅಸಲ್ಪದ ಶ್ರೀ ಗೀತಾಂಬಿಕಾ ಸೇವಾ ಸಮಿತಿ ಸಂಚಾಲಿತ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಇದೇ ಜನವರಿ 18ರಂದು ಶನಿವಾರ, ಸಾಯಂಕಾಲ ಗಂಟೆ 6ರಿಂದ, ಪ್ರತಿ ಸಂವತ್ಸರದಂತೆ ಈ ಬಾರಿಯೂ 48ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದೆ.
ಕಾರ್ಯಕ್ರಮದ ವಿವರ :
ಸಂಜೆ ಗಂಟೆ 6 ರಿಂದ 8:30ರ ವರೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ
ರಾತ್ರಿ 8:30 ರಿಂದ 9ರ ತನಕ ಭಜನೆ
ಬಳಿಕ ಶ್ರೀದೇವಿಗೆ ಮಹಾಪೂಜೆ ಹಾಗೂ ಸತ್ಯನಾರಾಯಣ ದೇವರಿಗೆ ಮಹಾಮಂಗಳಾರತಿ
ರಾತ್ರಿ 9:30 ರಿಂದ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ
ಈ ಧಾರ್ಮಿಕ ಸತ್ಕಾರ್ಯದಲ್ಲಿ ಸದ್ಭಕ್ತರಾದ ತಾವೆಲ್ಲರೂ ತಮ್ಮ ಬಂಧು – ಮಿತ್ರರೊಡಗೂಡಿ ಆಗಮಿಸಿ, ತನು- ಮನ- ಧನಗಳಿಂದ ಸಹಕರಿಸಿ, ಶ್ರೀ ಲಕ್ಷ್ಮಿ ಸತ್ಯನಾರಾಯಣ ದೇವರ ಹಾಗೂ ಪರಿವಾರ ದೇವತೆಯರ ಕೃಪೆಗೆ ಪಾತ್ರರಾಗಿ ಗಂಧ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಬೇಕಾಗಿ,
ಶ್ರೀ ಗೀತಾಂಬಿಕಾ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ, ಗೌರವಾಧ್ಯಕ್ಷ ಮುದ್ರಾಡಿ ದಿವಾಕರ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೋಟ್ಯಾನ್, ಸರ್ವ ಸದಸ್ಯರು ಹಾಗೂ ಮಹಿಳಾ ವಿಭಾಗದ ಸದಸ್ಯೆಯರು, ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿಯ ಪರವಾಗಿ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ, ಸಂಚಾಲಕ ಸುನಿಲ್ ಎಂ ಅಮಿನ್ ವಿನಂತಿಸಿದ್ದಾರೆ .

ವಿ. ಸೂ : ಪೂಜೆಯನ್ನು ಮಾಡಲಿಚ್ಚಿಸುವ ಭಕ್ತಾದಿಗಳು ಮುಂಚಿತವಾಗಿ ರೂಪಾಯಿ 351/ ನ್ನು ಮಂದಿರದ ಕಚೇರಿಯಲ್ಲಿ ಅಥವಾ ಅರ್ಚಕರಲ್ಲಿ ಮುಂಗಡವಾಗಿ ನೀಡಿ ಹೆಸರು ನೋಂದಾಯಿಸಬೇಕಾಗಿ ವಿನಂತಿ. ಶ್ರೀ ಸತ್ಯನಾರಾಯಣ ಪೂಜೆಗೆ ಸಂಬಂಧಿಸಿ ಎಣ್ಣೆ ಧನ- ಧಾನ್ಯಗಳನ್ನು ನೀಡಲಿಚ್ಚಿಸುವವರು , ಶ್ರೀ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಅಥವಾ ಅರ್ಚಕ ವೃಂದದವರನ್ನು ಸಂಪರ್ಕಿಸಬಹುದು.

Related posts

ಡಿ. 21ರಂದು ಅಂಧೇರಿಯಲ್ಲಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ 37ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಆಗಸ್ಟ್ 10 : ಬಿಲ್ಲವ ಘಾಟ್ಕೋಪರ್ ಹಾಗೂ ತುಳು ಕೂಟ ಅಸಲ್ಪಾ, ಇದರ ಆಶ್ರಯದಲ್ಲಿ ‘ಘಾಟ್ಕೋಪರ್ ದ ಆಟಿದ ಒಂಜಿ ದಿನ’

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬೊರಿವಿಲಿ 35ನೇ ವಾರ್ಷಿಕ ಶರನ್ನವರಾತ್ರಿ ಉತ್ಸವ.

Mumbai News Desk

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk