July 22, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.


ಘಾಟ್ಕೋಪರ್ ಪಶ್ಚಿಮ ಅಸಲ್ಪದ ಶ್ರೀ ಗೀತಾಂಬಿಕಾ ಸೇವಾ ಸಮಿತಿ ಸಂಚಾಲಿತ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಇದೇ ಜನವರಿ 18ರಂದು ಶನಿವಾರ, ಸಾಯಂಕಾಲ ಗಂಟೆ 6ರಿಂದ, ಪ್ರತಿ ಸಂವತ್ಸರದಂತೆ ಈ ಬಾರಿಯೂ 48ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದೆ.
ಕಾರ್ಯಕ್ರಮದ ವಿವರ :
ಸಂಜೆ ಗಂಟೆ 6 ರಿಂದ 8:30ರ ವರೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ
ರಾತ್ರಿ 8:30 ರಿಂದ 9ರ ತನಕ ಭಜನೆ
ಬಳಿಕ ಶ್ರೀದೇವಿಗೆ ಮಹಾಪೂಜೆ ಹಾಗೂ ಸತ್ಯನಾರಾಯಣ ದೇವರಿಗೆ ಮಹಾಮಂಗಳಾರತಿ
ರಾತ್ರಿ 9:30 ರಿಂದ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ
ಈ ಧಾರ್ಮಿಕ ಸತ್ಕಾರ್ಯದಲ್ಲಿ ಸದ್ಭಕ್ತರಾದ ತಾವೆಲ್ಲರೂ ತಮ್ಮ ಬಂಧು – ಮಿತ್ರರೊಡಗೂಡಿ ಆಗಮಿಸಿ, ತನು- ಮನ- ಧನಗಳಿಂದ ಸಹಕರಿಸಿ, ಶ್ರೀ ಲಕ್ಷ್ಮಿ ಸತ್ಯನಾರಾಯಣ ದೇವರ ಹಾಗೂ ಪರಿವಾರ ದೇವತೆಯರ ಕೃಪೆಗೆ ಪಾತ್ರರಾಗಿ ಗಂಧ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಬೇಕಾಗಿ,
ಶ್ರೀ ಗೀತಾಂಬಿಕಾ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ, ಗೌರವಾಧ್ಯಕ್ಷ ಮುದ್ರಾಡಿ ದಿವಾಕರ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೋಟ್ಯಾನ್, ಸರ್ವ ಸದಸ್ಯರು ಹಾಗೂ ಮಹಿಳಾ ವಿಭಾಗದ ಸದಸ್ಯೆಯರು, ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿಯ ಪರವಾಗಿ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ, ಸಂಚಾಲಕ ಸುನಿಲ್ ಎಂ ಅಮಿನ್ ವಿನಂತಿಸಿದ್ದಾರೆ .

ವಿ. ಸೂ : ಪೂಜೆಯನ್ನು ಮಾಡಲಿಚ್ಚಿಸುವ ಭಕ್ತಾದಿಗಳು ಮುಂಚಿತವಾಗಿ ರೂಪಾಯಿ 351/ ನ್ನು ಮಂದಿರದ ಕಚೇರಿಯಲ್ಲಿ ಅಥವಾ ಅರ್ಚಕರಲ್ಲಿ ಮುಂಗಡವಾಗಿ ನೀಡಿ ಹೆಸರು ನೋಂದಾಯಿಸಬೇಕಾಗಿ ವಿನಂತಿ. ಶ್ರೀ ಸತ್ಯನಾರಾಯಣ ಪೂಜೆಗೆ ಸಂಬಂಧಿಸಿ ಎಣ್ಣೆ ಧನ- ಧಾನ್ಯಗಳನ್ನು ನೀಡಲಿಚ್ಚಿಸುವವರು , ಶ್ರೀ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಅಥವಾ ಅರ್ಚಕ ವೃಂದದವರನ್ನು ಸಂಪರ್ಕಿಸಬಹುದು.

Related posts

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ಮುಂಬೈ : ಡಿ. 13ಕ್ಕೆ, ಜೋಗೇಶ್ವರಿಯ ಶ್ರೀ ಮಹಾಕಾಳಿ ಮಂದಿರದಲ್ಲಿ ಶನಿ ಗ್ರಂಥ ಪಾರಾಯಣ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk