28.4 C
Mumbai
March 7, 2026
Mumbai News Kannada
ಸುದ್ದಿ

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ ಸಿ ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡು ಹಗಲೇ ಬ್ಯಾಂಕಿಗೆ ನುಗ್ಗಿದ ಕದೀಮರ ಗುಂಪು ಸುಮಾರು 12 ಕೋಟಿ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.
ಕೋಟೆಕಾರ್ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿಗೆ ಆರು ಜನರಿದ್ದ ದರೋಡೆಕೋರರ ತಂಡವು ನುಗ್ಗಿ ಪಿಸ್ತೂಲ್ ಮತ್ತು ತಲವಾರ್ ತೋರಿಸಿ ಲೂಟಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅವರ ಭದ್ರತೆಗಾಗಿ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚುರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಇಂದು ಶುಕ್ರವಾರವಾದ್ದರಿಂದ ಮುಸ್ಲಿಂ ಬಾಹುಳ್ಯ ದ ಪ್ರದೇಶವಾದ ಕೆ ಸಿ ರೋಡು ಜಂಕ್ಷನ್ ನಲ್ಲಿ ಮಧ್ಯಾಹ್ನ ಪ್ರಾರ್ಥನೆ ಕಾರಣ ಜನ ಸಂಚಾರ ವಿರಾಳವಾಗಿತ್ತು. ಇದೇ ಸಮಯ ನೋಡಿಕೊಂಡು ಗುಂಪು ಬ್ಯಾಂಕಿಗೆ ದಾಳಿ ನಡೆಸಿದೆ. ಗ್ಯಾಂಗ್ನಲ್ಲಿ ಆರು ಜನರಿದ್ದು ಈ ಪೈಕಿ ಐವರು ಬ್ಯಾಂಕಿಗೆ ನುಗ್ಗಿದರೆ, ಓರ್ವ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಅವರಿಗಾಗಿ ಕಾದಿದ್ದ. ಬ್ಯಾಂಕ್ ನೊಳಗೆ ನುಗ್ಗಿದ್ದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ಬ್ಯಾಂಕಿನಿಂದ ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಹಣ ಮತ್ತು ಚಿನ್ನದ ಆಭರಣಗಳನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ .
ನಿನ್ನೆ ಬೀದರ್ ನಲ್ಲಿ ಎಸ್ ಬಿ ಐ ಎಟಿಎಂ ಬಳಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಇಬ್ಬರು ಅಗಂತುಕರು ಸಿ ಎಮ್ ಎಸ್ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿ ಸುಮಾರು 93 ಲಕ್ಷ ರೂಪಾಯಿ ಇದ್ದ ಹಣದ ಬಾಕ್ಸ್ ಅನ್ನು ಹೊತ್ತು ಪರಾರಿಯಾಗಿದ್ದರು. ಈ ಘಟನೆಯಲ್ಲಿ ಓರ್ವ ಸಿಬ್ಬಂದಿ ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೋರ್ವ ಸಿಬ್ಬಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತಿದ್ದಾರೆ. ಈ ಘಟನೆ ಇನ್ನೂ ಹಸಿರಾಗಿರುವಂತೆ ಇತ್ತ ಮಂಗಳೂರು ನಲ್ಲೂ ಇಂತಹದೇ ಮತ್ತೊಂದು ದರೋಡೆ ಪ್ರಕರಣ ವರದಿಯಾಗಿದೆ.

Related posts

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, ಏಪ್ರಿಲ್ 19ರಿಂದ ಜೂನ್ 1ರ ತನಕ ಏಳು ಹಂತಗಳಲ್ಲಿ ಚುನಾವಣೆ.

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಜಂಟಿ ಆಯೋಜನೆಯಲ್ಲಿ ನಡೆಯಲಿರುವ ‘ತುಳು ಸಮ್ಮೇಳನ’ದ ಪೂರ್ವಭಾವಿ ಸಭೆ.

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಉಡುಪಿಯಲ್ಲಿ ಜರಗಿದ ಯಶಸ್ವಿ ಸರಣಿ ಕಾರ್ಯಕ್ರಮಗಳು

Mumbai News Desk

ನಿಟ್ಟೆ ತೇಜಮ್ಮ ಪೂಜಾರಿ ನಿಧಾನ

Mumbai News Desk