30.9 C
Mumbai
June 8, 2026
Mumbai News Kannada
ಕ್ರೀಡೆ

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್‌.

ಫೆಬ್ರವರಿ 18ರಿಂದ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ತಂಡಕ್ಕೆ ವಾಪಸಾಗಿದ್ದರೆ, ಅನುಮಾನ ಎನ್ನಲಾಗಿದ್ದ ಜಸ್ಪ್ರೀತ್ ಬುಮ್ರಾ ಕೂಡ ಕಣಕ್ಕಿಳಿಯಲಿದ್ದಾರೆ. ಏಕದಿನ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡದೇ ಇದ್ದರೂ ಶ್ರೇಯಸ್‌ ಅಯ್ಯರ್ ಮತ್ತೆ ತಂಡಕ್ಕೆ ಮರಳಿದ್ದಾರೆ.

ಶನಿವಾರ ಭಾರತ ತಂಡದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದು ಹಲವು ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಮುಖ್ಯವಾಗಿ ಬುಮ್ರಾ ಗಾಯದ ಬಗ್ಗೆ ಮಹತ್ವದ ಅಪ್‌ಡೇಟ್ ಸಿಕ್ಕಿದ್ದು ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.

ಅಶಿಸ್ತಿನ ಕಾರಣದಿಂದ ಬಿಸಿಸಿಐ ಒಪ್ಪಂದವನ್ನೇ ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಮತ್ತೆ ತಂಡಕ್ಕೆ ವಾಪಸಾತಿ ಮಾಡಿದ್ದಾರೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಇತ್ತೀಚೆಗೆ ನಡೆದ ದೇಶೀಯ ಟೂರ್ನಿಯಲ್ಲಿ ಕೂಡ ಅಯ್ಯರ್ ಆಡಿದ್ದು ಬಿಸಿಸಿಐ ಅವರನ್ನು ಆಯ್ಕೆ ಪರಿಗಣಿಸಿದೆ.
ನಾಯಕತ್ವದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆಯಲಾಗಿದ್ದು ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಶುಭಮನ್ ಗಿಲ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಭವಿಷ್ಯದ ನಾಯಕನ ಹುಡುಕಾಟವನ್ನು ಬಿಸಿಸಿಐ ಆರಂಭಿಸಿದೆ.
ಮೊಹಮ್ಮದ್ ಸಿರಾಜ್ ತಂಡಕ್ಕೆ ಆಯ್ಕೆಯಾಗದ ಪ್ರಮುಖ ಆಟಗಾರ ಎನ್ನಬಹುದು. ಏಕದಿನ ಮಾದರಿಯಲ್ಲಿ ಸಿರಾಜ್ ಉತ್ತಮ ಪ್ರದರ್ಶನ ನೀಡಿದ್ದರು, ಶಮಿ ವಾಪಸಾದ ಬಳಿಕ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಹೀಗಿದೆ :

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ.

Related posts

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಥಾಣೆಯ ಆರೋಹಿ ಎಸ್ ಪೂಜಾರಿಗೆ ಚಿನ್ನ ಮತ್ತು ಕಂಚಿನ ಪದಕಗಳ ಸಾಧನೆ

Mumbai News Desk

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

Mumbai News Desk

ಮುಂಬೈ : ಜಿಲ್ಲಾ ಕ್ರೀಡಾ ಕಛೇರಿ ಆಯೋಜಿಸಿದ ಕ್ರಿಕೆಟ್‌ ಪಂದ್ಯಾಟದಲ್ಲಿ ಚೆಂಬೂರು ಕರ್ನಾಟಕ ಪ್ರೌಢಶಾಲೆಗೆ ಮುಂಬೈ ವಲಯದ ಕಿರೀಟ

Mumbai News Desk

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk