July 23, 2026
Mumbai News Kannada
ಸುದ್ದಿ

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ








ಸಮಾಜದಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಮಾಡುವ ಸಹಾಯವೇ ಸೇವೆ*- ಪುನರೂರು

ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ. ಸೇವಾ ಚಟುವಟಿಕೆ ನಮ್ಮ ಜೀವನದ ಅವಿಭಾಜ್ಯ ಭಾಗ ಹಾಗೂ ಸ್ವಭಾವವಾಗಬೇಕೆಂದು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಅವರು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ನೂತನ ಅಧ್ಯಕ್ಷರಾದ ಅಕ್ಷತಾ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಭಟ್ ದೇಂದಡ್ಕ ರವರಿಗೆ ಅಧಿಕಾರ ಹಸ್ತಾಂತರ ಮಾಡಿಸಿ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಮೂಲ್ಕಿಯ ಉಪಾಧ್ಯಕ್ಷರಾದ ಆನಂದ ಮೇಲಾಂಟ, ಕಾರ್ಯದರ್ಶಿ ದಾಮೋದರ ಶೆಟ್ಟಿ, ಕೊಡೆತ್ತೂರು, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಪಿ. ಎಸ್. ಸುರೇಶ್ ರಾವ್, ಶಶಿಕರ ಕೆರೆಕಾಡು, ಶೋಭಾ ರಾವ್, ಜೀವನ್ ಶೆಟ್ಟಿ, ಗೀತಾ ಶೆಟ್ಟಿ ಉಪಸ್ಥಿತರಿದ್ದರು.

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಕಾರ್ಯಕ್ರಮ ನಿರೂಪಿಸಿದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (01/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (10/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕುಲಾಲ ಭವನ ಉದ್ಘಾಟನೆ: ದಾನಿಗಳು ಮತ್ತು ಗಣ್ಯರಿಗೆ ಕುಲಾಲ ಸಂಘ ಮುಂಬೈ ವತಿಯಿಂದ ಗೌರವ ಸನ್ಮಾನ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk