28.4 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು





ಮುಂಬಯಿ:.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಹೆಬ್ರಿಯ ಕುಚ್ಚೂರು ಗ್ರಾಮದ ನಿವಾಸಿ  ಶೇಖರ್ ಶೆಟ್ಟಿಯವರು ಲಿವರ್ ಕ್ಯಾನ್ಸರ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು ಅವರ ಧರ್ಮಪತ್ನಿಯು ಸಹ ಮಲಗಿದ್ದಲ್ಲಿಯೇ ಇರುವುದರಿಂದ ಅವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿರುವುದನ್ನು ಮನಗಂಡು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಅಧ್ಯಕ್ಷರ ಸೂಚನೆಯಂತೆ ಶೇಖರ್ ಶೆಟ್ಟಿಯವರ ಪುತ್ರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯೆ ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘದ  ಸವಿತಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕಾರ್ಕಳದ ಬಜಗೋಳಿಯ ನಿವಾಸಿ ಕುಮಾರಿ ಹರ್ಷಿತಾ ಶೆಟ್ಟಿಯವರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದು ತಾಯಿ ಬೀಡಿ ಕಾರ್ಮಿಕಳಾಗಿದ್ದು ಮನೆ ನಿರ್ವಹಣೆ ನಡೆಸಲು ತೀರಾ ಅಶಕ್ತರಾಗಿದ್ದು ಅವರ ವಿದ್ಯಾಭ್ಯಾಸಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಅವರ ತಾಯಿ ಶ್ರೀಮತಿ ಉಷಾ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಅಂತೆಯೇ ಮಂಗಳೂರಿನ ಮಚ್ಚೂರು ಗ್ರಾಮದ ನಿವಾಸಿ ಕುಮಾರಿ ಶ್ರಾವ್ಯ ಶೆಟ್ಟಿಯವರ ತಂದೆ ನಿರುದ್ಯೋಗಿಯಾಗಿದ್ದು ಅವರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಅವರ ವಿದ್ಯಾಭ್ಯಾಸಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

      ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿರಿದ್ದರು.



Related posts

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, ಏಪ್ರಿಲ್ 19ರಿಂದ ಜೂನ್ 1ರ ತನಕ ಏಳು ಹಂತಗಳಲ್ಲಿ ಚುನಾವಣೆ.

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk