July 22, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು







ಮುಂಬಯಿ:.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಹೆಬ್ರಿಯ ಕುಚ್ಚೂರು ಗ್ರಾಮದ ನಿವಾಸಿ  ಶೇಖರ್ ಶೆಟ್ಟಿಯವರು ಲಿವರ್ ಕ್ಯಾನ್ಸರ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು ಅವರ ಧರ್ಮಪತ್ನಿಯು ಸಹ ಮಲಗಿದ್ದಲ್ಲಿಯೇ ಇರುವುದರಿಂದ ಅವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿರುವುದನ್ನು ಮನಗಂಡು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಅಧ್ಯಕ್ಷರ ಸೂಚನೆಯಂತೆ ಶೇಖರ್ ಶೆಟ್ಟಿಯವರ ಪುತ್ರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯೆ ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘದ  ಸವಿತಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕಾರ್ಕಳದ ಬಜಗೋಳಿಯ ನಿವಾಸಿ ಕುಮಾರಿ ಹರ್ಷಿತಾ ಶೆಟ್ಟಿಯವರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದು ತಾಯಿ ಬೀಡಿ ಕಾರ್ಮಿಕಳಾಗಿದ್ದು ಮನೆ ನಿರ್ವಹಣೆ ನಡೆಸಲು ತೀರಾ ಅಶಕ್ತರಾಗಿದ್ದು ಅವರ ವಿದ್ಯಾಭ್ಯಾಸಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಅವರ ತಾಯಿ ಶ್ರೀಮತಿ ಉಷಾ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಅಂತೆಯೇ ಮಂಗಳೂರಿನ ಮಚ್ಚೂರು ಗ್ರಾಮದ ನಿವಾಸಿ ಕುಮಾರಿ ಶ್ರಾವ್ಯ ಶೆಟ್ಟಿಯವರ ತಂದೆ ನಿರುದ್ಯೋಗಿಯಾಗಿದ್ದು ಅವರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಅವರ ವಿದ್ಯಾಭ್ಯಾಸಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

      ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿರಿದ್ದರು.



Related posts

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk

ಉದ್ಯಮಿ ಕಾಂತಿ ಶೆಟ್ಟಿಯವರಿಗೆ ‘ಉದ್ಯೋಗ ಯೋಗದಾನ ಪುರಸ್ಕಾರ’

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk