September 6, 2026
Mumbai News Kannada
ಸುದ್ದಿ

ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಆಕಾಶ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ





ಮಂಗಳೂರು: ಎಳೆಯ ವಯಸ್ಸಿನಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿರುವ ಗಾಯಕ, ಸಂಗೀತ ಸಂಯೋಜಕ ಮತ್ತು ವಿಡಿಯೋ ನಿರ್ದೇಶಕ ಮಂಗಳೂರಿನ ಅಜಿತ್ ಕುಮಾರ್ ಮತ್ತು ಅಂಜು ದಂಪತಿಯ ಪುತ್ರ ಆಕಾಶ್ ಅಜಿತ್ ಕುಮಾರ್ ಇವರನ್ನು ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಅವರ ಬಹುಮುಖ ಪ್ರತಿಭೆ, ಶ್ರಮ ಮತ್ತು ಕಲೆಗೆ ನೀಡಿರುವ ಅಮೂಲ್ಯ ಕೊಡುಗೆಗಾಗಿ ಈ ಗೌರವವನ್ನು ಅರ್ಪಿಸಲಾಯಿತು.

ಸಂಗೀತ ಕ್ಷೇತ್ರದಲ್ಲಿ ಅಪರೂಪದ ಪ್ರತಿಭೆ:
ಆಕಾಶ್ ತಮ್ಮ ಗಾಯನ ಶೈಲಿಯಿಂದ ಮಾತ್ರವಲ್ಲ, ಸಂಗೀತ ಸಂಯೋಜನೆ ಮತ್ತು ನಿರ್ದೇಶನದ ಮೂಲಕವೂ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಅವರ ಸಂಗೀತ ಮತ್ತು ದೃಶ್ಯಕಲೆಯ ಸಂಯೋಜನೆ ವಿಶಿಷ್ಟವಾಗಿ ಪ್ರೇಕ್ಷಕರ ಮನಸ್ಸು ಗೆದ್ದಿದೆ. ಅವರ ಸೃಜನಾತ್ಮಕ ದೃಷ್ಟಿಕೋನ, ಹೊಸತನ್ನು ಅನ್ವೇಷಿಸುವ ಮನೋಭಾವ, ಮತ್ತು ಶ್ರೇಷ್ಠತೆಗಾಗಿ ನಡೆಸಿದ ಪ್ರಯತ್ನ ಅವರನ್ನು ಬೇರೆಬೇರೆ ಮಟ್ಟದಲ್ಲಿ ಉನ್ನತಿಗೆ ಕೊಂಡೊಯ್ದಿದೆ. ಇತ್ತೀಚಿಗಷ್ಟೇ Tu Hi Hai ಎನ್ನುವಂತಹ ಹಿಂದಿ ಆಲ್ಬಮ್. ಸಾಂಗ್ ರಚಿಸಿ, ನಿರ್ದೇಶಿಸಿ ಇದೀಗ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಂಗೀತ ಅಪ್ಲಿಕೇಶನ್ ಗಳಲ್ಲಿ ಪದ್ಯ ಜನಮನ್ನಣೆ ಪಡೆದಿದೆ.

ಸನ್ಮಾನ ಸಮಾರಂಭ:
ಈ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಭಿಲಾಶ ಆನಂದ್ , ಕಾರ್ಯದರ್ಶಿ ಶ್ರೀನಿಧಿ ಶೆಟ್ಟಿ, ಕೋಶಾಧಿಕಾರಿ ಸಮೀಕ್ಷಾ ಹರೀಶ್ , ಲಯನ್ಸ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ಕಾರ್ಯದರ್ಶಿ ಮಾಲಿನಿ ವಸಂತ್, ಕೋಶಾಧಿಕಾರಿ ಸರೋಜ ರಾವ್ ಹಾಗೂ ಪ್ರಮುಖ ಅತಿಥಿಗಳು, ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದು, ಆಕಾಶ್ ಅವರ ಸಾಧನೆಯನ್ನು ಪ್ರಶಂಸಿಸಿದರು.

ಆಕಾಶ್ ಅವರ ಮುಂದಿನ ಯಾನ:
ಸಂಗೀತ ಮತ್ತು ದೃಶ್ಯಕಲೆಯ ಜಗತ್ತಿನಲ್ಲಿ ಹೊಸ ತಂತ್ರಜ್ಞಾನ, ವೈವಿಧ್ಯಮಯ ಶೈಲಿ ಹಾಗೂ ಶ್ರದ್ಧೆಯಿಂದ ದುಡಿಯುವ ಆಕಾಶ್, ಮುಂದಿನ ದಿನಗಳಲ್ಲಿ ಇನ್ನಷ್ಟು ಸೃಜನಾತ್ಮಕ ಸಂಗೀತ ಮತ್ತು ದೃಶ್ಯಕೃತಿಗಳನ್ನು ಉಡುಗೊರೆಯಾಗಿಸುವ ನಿರೀಕ್ಷೆಯಿದೆ.

ಈ ಗೌರವ ಸಮಾರಂಭವು ಯುವ ಪ್ರತಿಭೆಗಳಿಗೆ ಪ್ರೇರಣೆಯಾಗಿ, ಕಲಾ ಕ್ಷೇತ್ರದಲ್ಲಿ ಹೊಸ ಸಾಧನೆಗಳತ್ತ ಹೆಜ್ಜೆ ಹಾಕಲು ಉತ್ತೇಜನ ನೀಡುವ ಪಥವನ್ನು ನಿರ್ಮಿಸಿದೆ.

-ಲಿಯೋ ಕ್ಲಬ್ ಮಂಗಳಾದೇವಿ, ಮಂಗಳೂರು



Related posts

ರೈ ಸಮಿತಿ ಎಜುಕೇಷನಲ್ ಟ್ರಸ್ಟ್‌ನ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ಗೆ ಕಟೀಲು ಅನಂತ ಅಸ್ರಣ್ಣರ ಭೇಟಿ

Mumbai News Desk

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ AI -171 (Air India)ವಿಮಾನ ಪತನ, ಹಲವರ ಸಾವು ಶಂಕೆ

Mumbai News Desk

ಪರಿಯಾಳ ಸಮಾಜ ಮಹಾಸಭಾದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜಮಾಡಿ

Mumbai News Desk