32 C
Mumbai
March 7, 2026
Mumbai News Kannada
ಸುದ್ದಿ

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ





ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಬಾಗಿ.

ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 10 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ತಾರೀಕು 28,29 ಹಾಗೂ 30 ರಂದು ತಿರುಪತಿ, ತಿರುಮಲ ದಲ್ಲಿ ದಾಸ ಸಾಹಿತ್ಯ ಪ್ರೊಜೆಕ್ಟ್ ನ ಅಡಿಯಲ್ಲಿ ನಡೆದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಮೂರು ದಿವಸ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡುರು.

ಶ್ರೀ ಬಗಡಾಲ ಆನಂದತೀರ್ಥ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 150 ಕಿಂತಲು ಅಧಿಕ ತಂಡಗಳು 5000 ಕಿಂತಲೂ ಅಧಿಕ ಭಜಕರು ದೇಶದ ವಿವಿಧ ಕಡೆಗಳಿಂದ ಆಗಮಿಸಿದ್ದರು.

ವಿವಿಧ ಗಣ್ಯರು, ಯತಿಗಳು, ಭಾಗವಹಿಸಿದ್ದ ಈ 3 ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ ಮಠದೀಶರು, ಮಂತ್ರಾಲಯ ಮಠದೀಶರು, ಪಲಿಮಾರು ಮಠ ಹಾಗೂ ಅದಮಾರು ಸ್ವಾಮೀಜಿಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ದೇಶದ ಸುಪ್ರಸಿದ್ದ ಕಲಾವಿದರು ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನೀಡಿದರು.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ವಾಮೀಜಿಗಳ ಆಶೀರ್ವಾದ ಪಡೆದು, 3 ದಿವಸ ವಿವಿಧ ಕಾರ್ಯಕ್ರಮಗಳಲ್ಲಿ, ಹಾಗೂ ಆರಾಧನ ಮಹೋತ್ಸವ, ಭಜನೆ, ಮೆರವಣಿಗೆ ಹಾಗೂ ಪೂಜೆಯಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದರು.



Related posts

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಟ್ರಂಪ್ ಸುಂಕ ನೀತಿಯಿಂದ ತಲ್ಲಣ : ಭಾರತ ಸೇರಿದಂತೆ ವಿಶ್ವದಾದ್ಯಂತ ಶೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk