32 C
Mumbai
April 24, 2026
Mumbai News Kannada
ಪ್ರಕಟಣೆ

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ





ಸುದ್ದಿ ವಿವರ : ಪಿ.ಆರ್.ರವಿಶಂಕರ್  8483980035

        ಡೊಂಬಿವಿಲಿ : ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜರಗಿಸುತ್ತಾ ಬಂದಿರುವ ಡೊಂಬಿವಿಲಿ ಪೂರ್ವದ ಪ್ರತಿಷ್ಟಿತ  ಶ್ರೀ ವರದ ಸಿದ್ಧಿವಿನಾಯಕ  ಸೇವಾ ಮಂಡಲವು ತಮ್ಮ ಪರಿಸರದಲ್ಲಿನ ಶ್ರೀ ಮಹಾಗಣಪತಿ ಮಂದಿರದಲ್ಲಿ ಈ ವರ್ಷದ ಮಾಘ ಮಾಸದಲ್ಲಿನ ಗಣೇಶ ಉತ್ಸವವನ್ನು ಆಚರಿಸಲಿದೆ.

ಇದೇ ಫೆಬ್ರುವರಿ ತಾ.01 ಶನಿವಾರದಂದು ಪ್ರಾತಃ ಕಾಲದ ಗಣಹೋಮದೊಂದಿಗೆ ಆರಂಭವಾಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮದ್ಯಾಹ್ನದ ಮಹಾ ಮಂಗಳ ಆರತಿಯೊಂದಿಗೆ ಪೂರ್ಣಗೊಳ್ಳಲಿದ್ದು , ಬಳಿಕ ಪ್ರಸಾದ ರೂಪದಲ್ಲಿ  ಅನ್ನಸಂತರ್ಪಣೆ ಜರಗಲಿದೆ.

     ಅಪರಾಹ್ನ 2.30 ರ ಬಳಿಕ ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಲ ಹಾಗೂ ಶ್ರೀ ಸಚ್ಚಿದಾನಂದ ಸರಸ್ವತೀ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮುಂಬೈ  ಇವರ ಜಂಟಿ ಆಶ್ರಯದಲ್ಲಿ  ಇತ್ತೀಚೆಗೆ ಅಗಲಿದ ಯಕ್ಷಗಾನ ಕಲಾವಿದ ಹಾಗೂ ಯಕ್ಷಗುರು ದಿ.ಕುಕ್ಕೇಹಳ್ಳಿ ವಿಠಲ ಪ್ರಭು ಇವರ ಸ್ಮರಣಾರ್ಥ , ಪೌರಾಣಿಕ ಯಕ್ಷಗಾನ ಕಥಾನಕ ಭೀಷ್ಮ ವಿಜಯ         (ಬಡಗು ತಿಟ್ಟು)  ಆಡಿತೋರಿಸಲಿರುವರು.

ಯಕ್ಷಗಾನದ ಮೊದಲು  ಜರಗಲಿರುವ ಕಿರು ಸಭಾ ಕಾರ್ಯಕ್ರಮದಲ್ಲಿ ಆಮಂತ್ರಿತ ಗಣ್ಯ ಅತಿಥಿಗಳು ಭಾಗವಹಿಸಲಿರುವರು.

ಡೊಂಬಿವಿಲಿ ಪೂರ್ವದ ಭೋಪರ್ ರೋಡ್ , ನಾಂದಿವಲಿ ಯಲ್ಲಿನ ಶ್ರೀ  ವರದಸಿದ್ಧಿ ವಿನಾಯಕ ಸೇವಾಭವನದಲ್ಲಿ ಕಾರ್ಯಕ್ರಮ ಜರಗಲಿದ್ದು  ಭಕ್ತಾಭಿಮಾನಿಗಳು ಹಾಗೂ ಯಕ್ಷಕಲಾ ರಸಿಕ ಪ್ರೇಕ್ಷಕರು ಎರಡೂ ಕಾರ್ಯಕ್ರಮಗಳಿಗೆ ಬಂದು ಭಾಗವಹಿಸ ಬೇಕಾಗಿ  ಆಯೋಜಕರು ಪ್ರಕಟಣೆಯ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ.

     ಸುದ್ದಿ ವಿವರ :ಪಿ.ಆರ್.ರವಿಶಂಕರ್



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ

Mumbai News Desk

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk