July 23, 2026
Mumbai News Kannada
ಸುದ್ದಿ

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.







ಮುಲ್ಕಿ, ಜ. 30: ಮುಲ್ಕಿಯ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮವು ಜ. 29 ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಇದರ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಕ.ಸಾ.ಪ ಮಾಜಿ ಅದ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಧಾರ್ಮಿಕತೆಯ ಸೇವೆಯಲ್ಲಿ ನಿರತರಾಗಿರುವವರನ್ನು ಆರಿಸಿ ಸನ್ಮಾನಿಸುವ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭಕೋರಿದರು.
ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯ ರೈತರ ಸೊಸೈಟಿಯ ಅದ್ಯಕ್ಷ ರಂಗನಾಥ ಶೆಟ್ಟಿ, ಮುಲ್ಕಿ ತಾಲೂಕು ಕ. ಸಾ. ಪ ಹೋಬಳಿ ಅದ್ಯಕ್ಷ ಜೊಸ್ಸಿ ಪಿಂಟೋರವರು ಸಂದರ್ಭೋಚಿತವಾಗಿ ಮಾತನಾಡಿದರು. ಕೆ. ಎಸ್. ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಮಹಾಬಲ ಸನಿಲ್, ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಉಪಾದ್ಯಕ್ಷ ಮನೋಹರ್ ಕೋಟ್ಯಾನ್, ಜಯಪಾಲ್ ಶೆಟ್ಟಿ ಐಕಳ, ಉದ್ಯಮಿ ಜಾನ್ ಕ್ವಾಡ್ರಸ್, ವಿಜಯ ಕುಮಾರ್ ಕುಬೆವೂರು, ಬಂಕಿ ನಾಯಕ್, ರವಿಚಂದ್ರ ಹಾಗೂ ವಾಸು ಪೂಜಾರಿ ಚಿತ್ರಾಪು ಮೊದಲಾದವರು ಉಪಸ್ಥಿತರಿದ್ದರು.
ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ದಿನೇಶ್ ಶೆಟ್ಟಿ ದನ್ಯವಾದ ಅರ್ಪಿಸಿದರು. ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.



Related posts

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk

ಕಲ್ಯಾಣ್: ಧಾರ್ಮಿಕ, ಸಾಮಾಜಿಕ ಸಂಘಟಕ, ಭಜನಾ ಗಾಯಕ ದೇವಾನಂದ್ ಜೆ ಸುವರ್ಣ ನಿಧನ

Mumbai News Desk