28.4 C
Mumbai
March 7, 2026
Mumbai News Kannada
ಮುಂಬಯಿ

ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಮಹಿಳಾ ವಿಭಾಗದಿಂದ ಭಜನೆ – ಕುಣಿತ ಭಜನ ಸ್ಪರ್ಧೆ





ಭಜನೆಯ  ಮೂಲಕ ಮಕ್ಕಳಲ್ಲಿ ಧರ್ಮ, ದೇವರ ಮೇಲೆ ಭಕ್ತಿ-ಶ್ರದ್ಧೆ ಹೆಚ್ಚಾ ಗುತ್ತದೆ : ಸಿಎ ಸುರೇಂದ್ರ ಕೆ. ಶೆಟ್ಟಿ,

ನವಿಮುಂಬಯಿ, ನ. 6: ಸನಾತನ ಧರ್ಮ, ಸಂಸ್ಕೃತಿಯನ್ನು ಉಳಿಸಿ-ಬೆಳೆಸು ವಂತಹ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಭಜನೆ, ಕುಣಿತ ಭಜನೆಗಳಂತಹ ಧಾರ್ಮಿಕ ಕಾರ್ಯಕ್ರ ಮಗಳನ್ನು ಸಂಘ-ಸಂಸ್ಥೆಗಳು ಆಯೋ ಜಿಸುವುದರಿಂದ ಮಕ್ಕಳಲ್ಲಿ ಧರ್ಮ, ದೇವರ ಮೇಲೆ ಭಕ್ತಿ-ಶ್ರದ್ಧೆ ಹೆಚ್ಚಾ ಗುತ್ತದೆ ಎಂದು ಬಾಂಬೆ ಬಂಟ್ಸ್ ಅಸೋ ಸಿಯೇಶನ್‌ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ತಿಳಿಸಿದರು.
ಬಾಂಬೆ ಬಂಟ್ಸ್ ಅಸೋಸಿಯೇ ಶನ್‌ನ ಮಹಿಳಾ ವಿಭಾಗವು ನ. 4ರಂದು  ಜುಯಿ ನಗರದ ಬಂಟ್ಸ್ ಸೆಂಟರ್ ನಲ್ಲಿ ಆಯೋಜಿಸಿದ್ದ ಭಜನೆ ಮತ್ತು ಕುಣಿತ ಭಜನ ಸ್ಪರ್ಧೆಯ ಬಹು ಮಾನ ವಿತರಣ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟ್ಸ್ ಅಸೋಸಿಯೇಶನ್ ಧಾರ್ಮಿಕ, ಸಾಂಸ್ಕೃತಿಕ ಕಾರ್ಯ ಕ್ರಮಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ. ಮಹಿಳಾ  ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸದಾ ಕ್ರಿಯಾ ಶೀಲವಾಗಿ ಕೆಲಸ ಮಾಡುತ್ತಿರು  ಅಭಿನಂದನೀಯ. ಇಂದಿನ ಕಾಲಘಟ್ಟದಲ್ಲಿ ಇಂತಹ ಧಾರ್ಮಿಕ ಯೋಜನೆ ಅಗತ್ಯವಿದೆ. ಇಂತಹ ಕಾಠ್ಯಕ್ರಮಗಳಿಗೆ ಎಲ್ಲರೂ ಪ್ರೋತ್ಸಾ ಶಬೇಕಾಗಿದೆ. ಇಂದಿನ ಕಾರ್ಯಕ್ರ ಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಂಡಗಳು ಭಾಗವಹಿಸಿರುವುದು  ಸಂತೋಷದ ವಿಷಯ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಶ್ರೀ  ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಶ್ರೀಕ್ಷೇತ್ರ ಒಡಿಯೂರು ರು ಇದರ ಮಹಾರಾಷ್ಟ್ರ ಘಟಕದ ಅಧ್ಯಕ್ಷೆ  ಶ್ವೇತಾ ಚಂದ್ರಹಾಸ್ ರೈ ಮಾತನಾಡಿ, ಭಜನೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಜೀವನದಲ್ಲಿ  ಆಧ್ಯಾತ್ಮಿಕ ಚಿಂತನೆಯೊಂದಿಗೆ ಉತ್ತಮ ಜೀವನ ನಡೆಸಲು ಪ್ರೇರೇಪಿಸು ತ್ತದೆ. ಇಂತಹ ಕಾರ್ಯಕ್ರಮಗಳು  ನಿರಂತರ ಜರಗುತ್ತಿರಬೇಕು. ಶ್ರೀವಜ್ರಮಾತಾ ಮಹಿಳಾ ವಿಕಾಸ – ಕೇಂದ್ರ ಇಂತಹ ಧಾರ್ಮಿಕ ಕಾರ್ಯ ಕ್ರಮಗಳಿಗೆ ಸದಾ ಸಹಕಾರ ನೀಡುತ್ತಿದೆ ಎಂದರು.

ಅತಿಥಿಯಾಗಿದ್ದ ಸಮಾಜ ಸೇವಕಿ ಸೀಮಾ ಕಿಶೋರ್ ರಾವ್ ಮಾತ ನಾಡಿ, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ ಮಹಿಳಾ ವಿಭಾಗದ ಕಾರ್ಯ ಶ್ಲಾಘನೀಯ ಎಂದು ತಿಳಿಸಿ, ಶುಭ ಹಾರೈಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ತೇಜಾಕ್ಷಿ ಎಸ್. ಶೆಟ್ಟಿ ಪ್ರಸ್ತಾವಿಸಿದರು.

 ಭಜನೆ ಹಾಗೂ ಕುಣಿತ ಭಜನೆಯಲ್ಲಿ ವಿಜೇತರಾದ ತಂಡಗಳಿಗೆ ಅತಿಥಿಗಳುಫಲಕ ಹಾಗೂ ನಗದು ಬಹುಮಾನ  ವಿತರಿಸಿ ಶುಭ ಹಾರೈಸಿದರು. 

ಉಪಾಧ್ಯಕ್ಷ ನ್ಯಾಯವಾದಿ  ಡಿ. ಕೆ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಶೆಟ್ಟಿ,  ಕೋಶಾಧಿಕಾರಿ ಸಿ ಎ ವಿಶ್ವನಾಥ್ ಶೆಟ್ಟಿ, ಜತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ್ ಶೆಟ್ಟಿ, ಜತೆ ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ, ಉಪಕಾರಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ. ಗೌರವ ಕಾರ್ಯದರ್ಶಿ ಉಷಾ ಆರ್. ಶೆಟ್ಟಿ, ಗೌರವ ಕೋಶಾಧಿಕಾರಿ ಸಹಾನಿ ಏ. ಶೆಟ್ಟಿ, ಜತೆ ಕಾರ್ಯದರ್ಶಿ ಲಲಿತಾ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಮಾಯಾ ಆಳ್ವ ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯಾ ಶೆಟ್ಟಿ ಉಪಸ್ಥಿತರಿದ್ದರು.

ಪತ್ರಕರ್ತ ದಯಾಸಾಗರ್ ಕಾರ್ಯಕ್ರಮವನ್ನು ನಿರೂಪಿಸಿ, ಮಹಿಳಾ ವಿಭಾಗದ ಗೌರವ ಕೋಶಾಧಿಕಾರಿ ಸಹಾನಿ ವಿ. ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರಕಾರಿ ಸಮಿತಿಯ ಸದಸ್ಯರು, ವಿವಿಧ ಉಪ ಸಮಿತಿ ಯಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾಠ್ಯಕ್ರಮದ  ಯಶಸ್ಸಿಗೆ ಸಹಕರಿಸಿದರು.

——

ಸ್ಪರ್ಧೆಗಳ ಫಲತಾಂಶ

ಭಜನೆಯಲ್ಲಿ ಪ್ರಥಮ ಬಹುಮಾನವನ್ನು ನವೋದಯ ಕನ್ನಡ   ಸಂಘ ಠಾಣೆ, ದ್ವಿತೀಯ ಬಹುಮಾನವನ್ನು ಶ್ರೀ ಭ್ರಮರಾಂಬಿಕ ಭಜನಾ ಮಂಡಳಿ ಡೊಂಬಿವಲಿ, ತೃತೀಯ ಬಹುಮಾನವನ್ನು ನವೀನ್ ಮುಂಬೈಯ ಮಕ್ಕಳ ಭಜನ ಮಂಡಳಿ ಪಡೆದುಕೊಂಡಿತು.

ಕುಣಿತ ಭಜನೆಯಲ್ಲಿ ಪ್ರಥಮ ಬಹುಮಾನವನ್ನು ಶ್ರೀ ಮಹಾವಿಷ್ಣು ಭಜನಾ ಮಂಡಳಿ ಡೊಂಬಿವಲ್ಲಿ, ದ್ವಿತೀಯ ಬಹುಮಾನವನ್ನು ಬಿಲ್ಲವರ ಪೋಸಿಯೇಷನ್ ನವಿಮುಂಬಯಿ ಸ್ಥಳೀಯ ಸಮತಿ, ತೃತೀಯ ಬಹುಮಾನವನ್ನು ಮಹಿಷಮರ್ದಿನಿ ಭಜನಾ ಮಂಡಳಿ ಭೋವಿಲಿ ಪಡೆದುಕೊಂಡಿತು



Related posts

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿ, ಫೋರ್ಟ್, ಮುಂಬಯಿ : 81ನೇ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನವಿ ಮುಂಬಯಿ ಶಾಖೆಯ ನೂತನ ಕಾರ್ಯಾಲಯದ ಉದ್ಘಾಟನೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ,

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.

Mumbai News Desk

ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮೋಕ್ಷಿತ್ ಶ್ರೀಧರ್ ಮೂಲ್ಯ ಗೆ ಶೇ. 96 ಅಂಕ.

Mumbai News Desk