September 6, 2026
Mumbai News Kannada
ಸುದ್ದಿ

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ





ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷರೂ ಆದ ಗೋಪಾಲ ಪುತ್ರನ್ ಅವರ ತಂದೆ ಸುರೇಶ್ ಮೊಗವೀರ (86) ಅವರು ಇಂದು ತನ್ನ ಸ್ವಗ್ರಹ ಕುಂದಾಪುರದ ಅರಾಟೆ ಬಸ್ತಿಹಿತ್ಲು ಮನೆಯಲ್ಲಿ ನಿಧನರಾದರು.
ಸರಳ, ಮೃದು ಸ್ವಭಾವದವರಾದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದು, ಸಮಾಜ ಸೇವೆಯಲ್ಲಿ ನಿರತರಾಗಿದ್ದರು. ಅವರು ಗೋಪಾಲ ಪುತ್ರನ್ ಸಹಿತ 4 ಪುತ್ರರನ್ನು , 3 ಪುತ್ರಿಯರನ್ನು, ಹಾಗೂ ಅಪಾರ ಬಂಧು, ಬಳಗವನ್ನು ಅಗಲಿರುವರು.
ಸುರೇಶ್ ಮೊಗವೀರ ಅವರ ನಿಧನಕ್ಕೆ ಮೊಗವೀರ ಕುಲರತ್ನ, ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್, ಅಧ್ಯಕ್ಷ ರಾಜು ವಂಡ್ಸೆ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಅರುಣ್ ಕುಮಾರ್, ಮತ್ತು ಪದಾಧಿಕಾರಿಗಳು, ಟ್ರಸ್ಟಿಗಳು, ಮೊಗವೀರ ಬ್ಯಾಂಕ್ ನ ಕಾರ್ಯಧ್ಯಕ್ಷರು, ನಿರ್ದೇಶಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಬೈಂದೂರು: ಪ್ರವಾಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಶ್ರಾವಣಿ ರಾಜೇಶ್ ಕೋಟ್ಯಾನ್ ಗೆ ಶೇ 94.50 ಅಂಕ.

Mumbai News Desk

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ

Mumbai News Desk