30.9 C
Mumbai
June 8, 2026
Mumbai News Kannada
ಪ್ರಕಟಣೆ

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ





ಜಗಜ್ಯೋತಿ ಕಲಾವೃಂದ ಮುಂಬೈ ಇದರ 38ನೇ ವಾರ್ಷಿಕೋತ್ಸವ, ಜಗಜ್ಯೋತಿ ಕಲಾ ವೃಂದದ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರಧಾನ ಸಮಾರಂಭವು
ರವಿವಾರ ದಿನಾಂಕ 09.02.2025 ಸಾಯಂಕಾಲ 4.00 ಗಂಟೆಗೆ ದೊಂಬಿವಿಲಿ ಪೂರ್ವ ದತ್ತ ನಗರದ ಲೇವಾ ಭವನದಲ್ಲಿ ಡಾ. ದಿವಾಕರ ಶೆಟ್ಟಿ, ಇಂದ್ರಾಳಿ
(ಕಾರ್ಯಾಧ್ಯಕ್ಷರು – ಕರ್ನಾಟಕ ಸಂಘ, ಡೊಂಬಿವಲಿ) ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅತಿಥಿಗಳಾಗಿ ಶ್ರೀ ಪ್ರಭಾಕರ ಆರ್. ಶೆಟ್ಟಿ
( ಉಪಾಧ್ಯಕ್ಷರು : ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ), ಅರುಣ ಎಸ್. ಶೆಟ್ಟಿ, ಪಡುಕೂಡುರು
( ಕಾರ್ಯಾಧ್ಯಕ್ಷರು : ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ, ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ) ಯೋಗಿನಿ ಸುಕುಮಾರ್ ಶೆಟ್ಟಿ
(ಕಾರ್ಯಾಧ್ಯಕ್ಷೆ: ಮಹಿಳಾ ವಿಭಾಗ, ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ) ಅಭಿಜ್ಞಾ ಹೆಗ್ಡೆ (ಭರತನಾಟ್ಯ ಕಲಾವಿದೆ) ಉಪಸ್ಥಿತರಿರುವರು.

ಈ ಸಂದರ್ಭ 2024ರ ಅಖಿಲ ಭಾರತ ಮಟ್ಟದ ನಡೆದ ಜಗಜ್ಯೋತಿ ಕಲಾವೃಂದದ ಸುಶೀಲಾ ಸೀತಾರಾಮ ಕಥಾ ಪ್ರಶಸ್ತಿಯನ್ನು ಸ್ಮಿತಾ ಅಮೃತರಾಜ್‌ ಅವರಿಗೂ ಕಾವ್ಯ ಪ್ರಶಸ್ತಿಯನ್ನು ಅಕ್ಷತಾ ಕೃಷ್ಣಮೂರ್ತಿ ಅವರಿಗೂ ಪ್ರಧಾನಿಸಲಾಗುವುದು.

ಅಂದು ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು :
ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ತಂಡಗಳು
1) ಪೂಜಾ ನೃತ್ಯ : ಕುಮಾರಿ ನಿಶಿಕಾ ಪದ್ಮನಾಭ ಶೆಟ್ಟಿ
2) ಚಿಣ್ಣರ ಬಿಂಬದ ಚಿಣ್ಣರಿಂದ
3) ಪವಿ ಆರ್ಟ್ಸ್ ವಿಜುವಲ್ ಇನ್ಸಿಟ್ಯೂಟ್‌ನ ವಿದ್ಯಾರ್ಥಿಗಳಿಂದ
4) ತುಳು ವೆಲ್‌ಫೇರ್ ಅಸೋಸಿಯೇಷನ್
5) ಶ್ರೀ ವಿಷ್ಣು ಮಂದಿರ (ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ) 6) ಕುಲಾಲ ಸಂಘ ಥಾಣೆ, ಬದ್ಲಾಪುರ, ಭಿವಂಡಿ ಸ್ಥಳೀಯ ಸಮಿತಿಯವರಿಂದ
ಮತ್ತು
ಹೆಜಮಾಡಿ ಮನೋಜಕುಮಾರ್‌ರವರ ಸಂಯೋಜನೆಯಲ್ಲಿ
ತುಳು ವೆಲ್‌ಫೇರ್ ಎಸೋಸಿಯೇಷನ್ ಯಕ್ಷಗಾನ ತರಬೇತಿ ಶಿಬಿರದ ವಿದ್ಯಾರ್ಥಿ ಹಾಗೂ ಮುಂಬಯಿಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ
ಭಾರ್ಗವ ವಿಜಯ್‌
ಎಂಬ ತುಳು ಯಕ್ಷಗಾನ ಪ್ರಸಂಗವನ್ನು ಆಡಿತೋರಿಸಲಾಗುವುದು.
ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಭಾಗವಹಿಸುವಂತೆ ಸಮಿತಿಯ ಅಧ್ಯಕ್ಷ ರಮೇಶ್‌ ಎ. ಶೆಟ್ಟಿ
ಕೋಶಾಧಿಕಾರಿ ಚಂದ್ರ ಎನ್. ನಾಯ್, ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ ಪಿ. ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಬಾಬು ಕೆ. ಮೊಗವೀರ, ಸಲಹೆಗಾರರಾದ
ಸುಕುಮಾರ ಎನ್. ಶೆಟ್ಟಿ, ಪ್ರಶಸ್ತಿ ಸಮಿತಿಯ ಸಲಹೆಗಾರ ಶ್ರೀ ಶೇಖರ ಆರ್. ಶೆಟ್ಟಿ, ಇನ್ನ ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.



Related posts

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ  26 ರಂದು  ವಾರ್ಷಿಕ  ಮಹಾಪೂಜೆ.

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk