27.7 C
Mumbai
July 23, 2026
Mumbai News Kannada
ಕ್ರೀಡೆ

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ







ಮೀರಾರೋಡ್. ಮೀರಾ-ಭಾಯಂದರ್ ನ ಕನಕಿಯಾ ಇಂಟರ್ನ್ಯಾಶನಲ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸಮರ್ಥ್ ರೈ ಅವರು ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನ ಅಂಡರ್-15 ವಿಭಾಗದಲ್ಲಿ ದೆರ್ವನ್ ತಂಡದ ಮೂಲಕ ರತ್ನಗಿರಿ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ,

  ಟೂರ್ನಮೆಂಟ್‌ನಲ್ಲಿ ಅವರ ಪ್ರಮುಖ ಪಾತ್ರದಿಂದಾಗಿ ಮತ್ತು ಅತಿ ಹೆಚ್ಚು ಗೋಲು ಬಾರಿಸಿ ತಂಡವು ಟೂರ್ನಮೆಂಟ್‌ನಲ್ಲಿ ಟಾಪ್ 3 ಸ್ಥಾನವನ್ನು ಕಾಯ್ದುಕೊಳ್ಳಲು ಸಹಾಯವಾಗಿದೆ. ಅವರು ಬೋರಿವಿಲಿಯ
ಸಿಎಫ್ಸಿಐ ಕ್ಲಬ್‌ನಲ್ಲಿ ಫುಟ್ಬಾಲ್ ತರಬೇತಿ ಪಡೆಯುತ್ತಿದ್ದಾರೆ.

2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು , ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ. 

ಸಮರ್ಥ್ ರೈ ಯವರಿಗೆ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ

ಸಮರ್ಥ್ ರೈ ಅವರ ಈ ಸಾಧನೆ ಅವರ ಪರಿಶ್ರಮ ಮತ್ತು ಸಮರ್ಪಣೆಯ ಫಲವಾಗಿದೆ, ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು.



Related posts

ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌; ಉದಯ ಎಸ್. ಶೆಟ್ಟಿ ತಂಡಕ್ಕೆ ದೇಶದ ವಿವಿದೆಡೆ ಜಯಬೇರಿ.

Mumbai News Desk

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk

ಉಡುಪಿ ಮೂಲದ ಕನ್ನಡತಿ, ದುಬಾಯಿಯ ಗುಲ್ಶನ್ ಬಾನು ಕಾಜಿಯಿಂದ ಜಪಾನ್‌ನಲ್ಲಿ ಐತಿಹಾಸಿಕ ದಾಖಲೆ

Mumbai News Desk

ಕಬಡ್ಡಿ ವಿಶ್ವಕಪ್: ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು ಸೋಲಿಸಿ ಸತತ ಎರಡನೇ ಬಾರಿಗೆ ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿ: ವಿಜೃಂಭಣೆಯಿಂದ ಜರುಗಿದ 79ನೇ ವರ್ಷದ ಕಂಬಳೋತ್ಸವ

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 59ನೇ ಆರ್. ಎನ್. ಉಚ್ಚಿಲ್ ಸ್ಮಾರಕ ಅಥ್ಲೆಟಿಕ್ಸ್ ಕ್ರೀಡಾಕೂಟ

Mumbai News Desk