September 6, 2026
Mumbai News Kannada
ಕ್ರೀಡೆ

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ





ಮೀರಾರೋಡ್. ಮೀರಾ-ಭಾಯಂದರ್ ನ ಕನಕಿಯಾ ಇಂಟರ್ನ್ಯಾಶನಲ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸಮರ್ಥ್ ರೈ ಅವರು ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನ ಅಂಡರ್-15 ವಿಭಾಗದಲ್ಲಿ ದೆರ್ವನ್ ತಂಡದ ಮೂಲಕ ರತ್ನಗಿರಿ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ,

  ಟೂರ್ನಮೆಂಟ್‌ನಲ್ಲಿ ಅವರ ಪ್ರಮುಖ ಪಾತ್ರದಿಂದಾಗಿ ಮತ್ತು ಅತಿ ಹೆಚ್ಚು ಗೋಲು ಬಾರಿಸಿ ತಂಡವು ಟೂರ್ನಮೆಂಟ್‌ನಲ್ಲಿ ಟಾಪ್ 3 ಸ್ಥಾನವನ್ನು ಕಾಯ್ದುಕೊಳ್ಳಲು ಸಹಾಯವಾಗಿದೆ. ಅವರು ಬೋರಿವಿಲಿಯ
ಸಿಎಫ್ಸಿಐ ಕ್ಲಬ್‌ನಲ್ಲಿ ಫುಟ್ಬಾಲ್ ತರಬೇತಿ ಪಡೆಯುತ್ತಿದ್ದಾರೆ.

2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು , ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ. 

ಸಮರ್ಥ್ ರೈ ಯವರಿಗೆ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ

ಸಮರ್ಥ್ ರೈ ಅವರ ಈ ಸಾಧನೆ ಅವರ ಪರಿಶ್ರಮ ಮತ್ತು ಸಮರ್ಪಣೆಯ ಫಲವಾಗಿದೆ, ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು.



Related posts

ಕುಲಾಲ ಸಂಘ ಮುಂಬಯಿ: ಕುಲಾಲ ಕ್ರೀಡೋತ್ಸವದ ಬಹುಮಾನ ವಿತರಣೆ

Mumbai News Desk

ಮುಂಬೈ ಮ್ಯಾರಥಾನ್‌ನಲ್ಲಿ ವೈದ್ಯನ ‘ಗೋಲ್ಡನ್’ ಓಟ: ಆರ್ಥೋಪೆಡಿಕ್ ಸರ್ಜನ್ ಕಾರ್ತಿಕ್ ಕರ್ಕೇರಗೆ ಚಿನ್ನದ ಪದಕ

Mumbai News Desk

ವಸಾಯಿ ಕರ್ನಾಟಕ ಸಂಘ – ಯುವ ವಿಭಾಗದವರಿಂದ ಬ್ಯಾಡ್ಮಿಂಟನ್ ಪಂದ್ಯಾಟ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಫುಟ್ ಬಾಲ್‌ ಲೀಗ್ KVAFL–2: ಟೈಗರ್ಸ್ ಯುನೈಟೆಡ್‌ಗೆ ಚಾಂಪಿಯನ್ ಪಟ್ಟ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ‘ಸಾಫಲ್ಯ ಕ್ರೀಡಾ ಸ್ಪರ್ಧೆ – 2026’

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk