July 23, 2026
Mumbai News Kannada
ಸುದ್ದಿ

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ







ಗ್ರಾಹಕರ , ಷೇರುದಾರರು, ಸಮಾಜ ಬಾಂಧವರ ಸಹಕಾರದಿಂದ ಆರನೇ ಬಾರಿ ಪ್ರಶಸ್ತಿ ಲಭಿಸಿದೆ: ಉಳ್ತೂರು   ಮೋಹನದಾಸ್ ಶೆಟ್ಟಿ

ಮುಂಬಯಿ ಪೆ 10. ಪ್ರತಿ ವರ್ಷ ಅತಿ ಹೆಚ್ಚು ಠೇವಣಿ ಸಂಗ್ರಹಿಸಿದ ಕ್ರೆಡಿಟ್ ಸೊಸೈಟಿಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಬ್ಯಾಂಕೋ ಬ್ಲೂ ರಿಬ್ಬನ್’ ಪ್ರಶಸ್ತಿಯು ಮುಂಬೈ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ್ನು ಗುರುತಿಸಿ 2023 – 2024 ರ ಸಾಲಿನ ಠೇವಣಿ ವರ್ಗದ ಅಡಿಯಲ್ಲಿ ಈ ಪ್ರಶಸ್ತಿ ಲಭಿಸಿರುತ್ತದೆ.

ಬ್ಯಾಂಕೋ 1990 ರಲ್ಲಿ ಸ್ಥಾಪಿಸಲಾದ ಏವಿಸ್ ಪಬ್ಲಿಕೇಶನ್‌ನ ಅತ್ಯಂತ ಪ್ರಸಿದ್ಧ ಮತ್ತು ವಿಶ್ವಾಸಾರ್ಹ ಬಿಎಫ್‌ಎಸ್‌ಐ(ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮಾ ವಲಯ) ಪ್ರಕಾಶನ ಬ್ರಾಂಡ್ ಆಗಿದೆ. ‘ಬ್ಯಾಂಕೋ ಬ್ಲೂ ರಿಬ್ಬನ್’ ಎಲ್ಲಾ ಸಹಕಾರಿ ಬ್ಯಾಂಕ್‌ಗಳು ಮತ್ತು ಕ್ರೆಡಿಟ್ ಸೊಸೈಟಿಗಳಿಗೆ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿದೆ. ಇಂತಹ ವೇದಿಕೆಯಲ್ಲಿ ಬಂಟ ಸಮಾಜದ ಪ್ರತಿಷ್ಠಿತ ಮಾತೃಭೂಮಿ ಕ್ರೆಡಿಟ್ ಸೊಸೈಟಿಯ ಆರ್ಥಿಕ ಸೇವಾ ಕಾರ್ಯಗಳನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದೆ.

ಈ ಹಿಂದೆಯೂ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ಗೆ 5 ಬಾರಿ ಈ ಪ್ರಶಸ್ತಿಯು ಲಭ್ಯವಾಗಿರುವುದಲ್ಲದೆ, ಈ ಬಾರಿಯ ಪ್ರಶಸ್ತಿಯೂ ಸೊಸೈಟಿಯ ಕಿರೀಟಕ್ಕೆ ಮುಕುಟಪ್ರಾಯವಾಗಿ ಲಭಿಸಿದೆ ಎನ್ನುವುದು ಅತ್ಯಂತ ಅಭಿಮಾನದ ವಿಷಯ. ಬ್ಯಾಂಕೊ/ಏವಿಸ್ ಪಬ್ಲಿಕೇಷನ್, ಕೊಲ್ಲಾಪುರ ಮತ್ತು ಗ್ಯಾಲಕ್ಸಿ ಇನ್ಮಾ ಪುಣೆ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರಶಸ್ತಿ ಪ್ರಧಾನ ಸಮಾರಂಭವು ಜ 30.ರಂದು ಲೋನಾವಾಲಾದ ಆಂಬಿ ವ್ಯಾಲಿ ಸಿಟಿಯಲ್ಲಿ  ನಡೆಯಿತು

ಸಹಕಾರಿ ಇಲಾಖೆ ಪುಣೆಯ ಮಾಜಿ ಆಯುಕ್ತರಾದ ಚಂದ್ರಕಾಂತ್ ದಳ್ವಿ ,ಅಶೋಕ್ ನಾಯಕ್ ನಿರ್ದೇಶಕ ಗ್ಯಾಲಕ್ಸಿ ಇನ್ಮಾ ಪುಣೆ ಮತ್ತು ಅವಿನಾಶ್ ಶಿಂತ್ರೆ, ಪ್ರಧಾನ ಸಂಪಾದಕ ಬ್ಯಾಂಕೊ, ಏವಿಸ್ ಪಬ್ಲಿಕೇಶನ್, ಕೊಲ್ಲಾಪುರ ಇವರ  ಉಪಸ್ಥಿತಿಯಲ್ಲಿ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ 

ಸೊಸೈಟಿಯ ಕ್ರೆಡಿಟ್ ಮತ್ತು ಅಡಮಿನ್ ಮೆನೇಜರ್   ರಮೇಶ್ ಜಿ ಸುವರ್ಣ  ಮತ್ತು ರಿಕವರಿ ಮ್ಯಾನೇಜರ್   ಹರೀಶ್ ಟಿ.ಶೆಟ್ಟಿ  ಪ್ರಶಸ್ತಿಯನ್ನು ಸ್ವೀಕರಿಸಿದರು. 

  ಪ್ರಶಸ್ತಿ ಬಂದಿರುವ ಬಗ್ಗೆ  ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷರಾದ ಉಳ್ತೂರು   ಮೋಹನದಾಸ್ ಶೆಟ್ಟಿ ಅವರು ಸೊಸೈಟಿಯ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಯಾವಾಗಲೂ ಬೆಂಬಲಿಸಿದ ನಮ್ಮ ಎಲ್ಲಾ ಷೇರುದಾರರು, ಠೇವಣಿದಾರರು, ನಿರ್ದೇಶಕರ ಮಂಡಳಿ ಮತ್ತು ಸಲಹಾ ಮಂಡಳಿಯ ಸದಸ್ಯರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ಆಡಳಿತ ಮಂಡಳಿ, ನಿರ್ದೇಶಕರ ಮಂಡಳಿ ಮತ್ತು ಸಲಹಾ ಮಂಡಳಿ,ಎಲ್ಲಾ ಮಾಜಿ ಕಾರ್ಯಾಧ್ಯಕ್ಷರು, ಹಾಗೂ ಬಂಟರ ಸಂಘ ಮುಂಬೈಯ ಅಧ್ಯಕ್ಷರಾಗಿರುವ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು, ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಬಂಟರ ಸಂಘ ಮುಂಬೈ ಇದರ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದವರು, ಮಾತೃಭೂಮಿಯ ಎಲ್ಲಾ ಪದಾಧಿಕಾರಿಗಳನ್ನು, ಹಾಗೂ ಸಿಬ್ಬಂದಿ ವರ್ಗವನ್ನು ಅಭಿನಂದಿಸಿದ್ದಾರೆ,



Related posts

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.

Mumbai News Desk

ಡಿ.ಕೆ. ಶಿವಕುಮಾರ್ ಅವರಿಗೆ ಹಿತೈಷಿ ತೋನ್ಸೆ ಜಯಕೃಷ್ಣ ಶೆಟ್ಟಿ ಅವರಿಂದ ಆತ್ಮೀಯ ಅಭಿನಂದನೆ: ಪರಿಸರ ಸಂಘಟನೆಯ ಕಾರ್ಯವೈಖರಿಗೆ ನಿಯೋಜಿತ ಸಿಎಂ ಶ್ಲಾಘನೆ

Mumbai News Desk

ಮನಿಲಾದಲ್ಲಿ ಪ್ರಭಾ ಸುವರ್ಣ ಅವರಿಗೆ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಪ್ರಶಸ್ತಿ ಗೌರವ

Mumbai News Desk

ಶತಾಯುಷಿ,ಗಂಜಿಮಠ ಶಿವಣ್ಣ ಆಚಾರ್ಯ ನಿಧನ

Mumbai News Desk

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk