28.4 C
Mumbai
March 7, 2026
Mumbai News Kannada
ಪ್ರಕಟಣೆ

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ,ಫೆ. 15ರಂದು, 26ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಮಹಾಪೂಜೆ





ವಸಯಿ ಪಶ್ಚಿಮ ನವಯುಗ್ ನಗರದ, ದಿವಾನ್ ಮನ್ ತಲಾವ್ ಬಳಿಯ, ವಿಜಯ್ ಶ್ರೀ ಹೌಸಿಂಗ್ ಸೊಸೈಟಿಯಲ್ಲಿ ಶ್ರೀ ಶನಿ ದೇವರನ್ನು ಆರಾಧಿಸಿಕೊಂಡು ಬರುತ್ತಿರುವ, ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಯ 26ನೇ ವರ್ಷದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಮಹಾಪೂಜೆ ಫೆಬ್ರವರಿ 15 ರಂದು ಜರಗಲಿದೆ.
ಅಂದು ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು:
ಬೆಳಿಗ್ಗೆ ಗಂಟೆ 6 ರಿಂದ 7:30ರ ವರೆಗೆ ಗಣ ಹೋಮ
ಬೆಳಿಗ್ಗೆ 7:30 ರಿಂದ 8:30ರ ವರೆಗೆ ನಾಗಾಭಿಷೇಕ
ಬೆಳಿಗ್ಗೆ 8:30 ರಿಂದ 9ರವರೆಗೆ ಶ್ರೀ ಹನುಮಾನ್ ಪೂಜೆ
ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ತನಕ ಶ್ರೀ ಸತ್ಯನಾರಾಯಣ ಮಹಾಪೂಜೆ ( ಶ್ರೀಕಾಂತ್ ಭಟ್ ಥಾಣೆ )
ಮಧ್ಯಾಹ್ನ 12:30 ರಿಂದ 1ರ ವರೆಗೆ ಶ್ರೀ ಶನಿ ದೇವರ ಕಲಶ ಪ್ರತಿಷ್ಠೆ
ಮಧ್ಯಾಹ್ನ 1 ರಿಂದ ಸಾಯಂಕಾಲ 7:30ರ ತನಕ ಶನಿಗ್ರಂಥ ಪಾರಾಯಣ ( ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಪೋರ್ಟ್ ಇವರಿಂದ )
ಸಾಯಂಕಾಲ 7:30 ರಿಂದ 8:30ರ ವರೆಗೆ ಭಕ್ತಿ ಭಜನೆ
ರಾತ್ರಿ 8:30 ರಿಂದ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ
ರಾತ್ರಿ 7.30ರಿಂದ 11.30ರ ತನಕ ಸಾರ್ವಜನಿಕ ಅನ್ನ ಸಂತರ್ಪಣೆ.
ಸಮಿತಿಯ 26ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನೀಶ್ವರ ಮಹಾಪೂಜೆಗೆ ಸದ್ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ತನು -ಮನ- ಧನದಿಂದ ಸಹಕರಿಸಿ ಶ್ರೀದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಿ ತೀರ್ಥ ಪ್ರಸನ್ನ ಸ್ವೀಕರಿಸುವಂತೆ, ಸಮಿತಿಯ ಗೌರವಾಧ್ಯಕ್ಷ ಪಾಂಡು ಎಲ್ ಶೆಟ್ಟಿ, ಅಧ್ಯಕ್ಷ ಉಮೇಶ್ ಎಚ್ ಕರ್ಕೆರ, ಉಪಾಧ್ಯಕ್ಷ ಜಯ ಜಿ ಅಮೀನ್, ಗೌರವ ಕಾರ್ಯದರ್ಶಿ ಪ್ರಭಾಕರ್ ಎನ್ ಬಂಗೇರ, ಗೌರವ ಕೋಶಾಧಿಕಾರಿ ಉಮೇಶ್ ಎಂ ಕರ್ಕೇರ, ಜತೆ ಕಾರ್ಯದರ್ಶಿ ಕೆ ಪಿ ಶಾಮ್, ಜೊತೆ ಕೋಶಾಧಿಕಾರಿ ಶಂಕರ್ ಬಿಲ್ಲವ, ಅರ್ಚಕರಾದ ಶಶಿ ಕರ್ಕೇರ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ.



Related posts

ಜ.14 ರಿಂದ 23ರ ತನಕ ಶ್ರೀ ಕ್ಷೇತ್ರ ಕಾಂತಾವರದ ವರ್ಷಾವಧಿ ಜಾತ್ರಾ ಮಹೋತ್ಸವ.

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk

ಮೇ 2: ಇನ್ನಂಜೆ  ಶಶಿಧರ ಶೆಟ್ಟಿ  ದಂಪತಿಯ ನೇತೃತ್ವದಲ್ಲಿ ಕಾಪು ಶೃಷ್ಟಿ ರೆಸಿಡೆನ್ಸಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

Mumbai News Desk

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk