September 6, 2026
Mumbai News Kannada
ತುಳುನಾಡು

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ





ಪಡುಬಿದ್ರಿ : ವಿಶ್ವದಲ್ಲೇ ಪ್ರಾಕೃತಿಕ ಅರಾಧನೆಗೆ ಹೆಸರುವಾಸಿಯಾಗಿರುವ ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಡೊಂಬಿವಲಿ ನಗರದ ಪ್ರಸಿದ್ಧ ಕೈಗಾರಿಕೋದ್ಯಮಿ, ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಅಜೀಲರ ಮನೆ ಅನಂದ ಶೆಟ್ಟಿ ಎಕ್ಕಾರ್, ಲತಾ ಅನಂದ ಶೆಟ್ಟಿ ದಂಪತಿಯು ತಮ್ಮ ಕುಟುಂಬಿಕರು, ಬಂಧು- ಮಿತ್ರರನ್ನು ಒಗ್ಗೂಡಿಸಿ ಸೇವಾ ರೂಪದಲ್ಲಿ ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ದೈವಾರ್ಷಿಕ ನಡೆಯುವ  ಸೇವೆಯಾದ ಡಕ್ಕೆ ಬಲಿ ಸೇವೆಯನ್ನು ನೀಡಿದರು. ಬೆಳಿಗ್ಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ತಂಬಿಲ ಸೇವೆ ನಡೆದು ಢಕ್ಕೆ ಬಲಿ ಸೇವೆ ನಡೆಯಿತು.

  ಡಕ್ಕೆ ಬಲಿ ಸೇವೆ ನಡೆಯುವ ಬ್ರಹ್ಮಸ್ಥಾನಕ್ಕೆ ಜ್ನಾನ ಮಂದಿರದಿಂದ ಚಂಡೆ, ಡೋಲು, ವಾದ್ಯ ವಾಲಗದೊಂದಿಗೆ ಮೆರವಣಿಗೆಯಲ್ಲಿ ಫಲ, ಪುಷ್ಪ ಗಳ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಬದಲ್ಲಿ ಅನಂದ ಶೆಟ್ಟಿ ಎಕ್ಕಾರ್, ಲತಾ ಅನಂದ ಶೆಟ್ಟಿ, ಪುತ್ರಿಯರಾದ  ನಿಧಿ ಶೆಟ್ಟಿ, ದಿವ್ಯ ಕರುಣಾಕರ ಶೆಟ್ಟಿ, ಅಳಿಯ ಕರುಣಾಕರ ಶೆಟ್ಟಿ, ಉಮಾವತಿ ಶೆಟ್ಟಿ, ಎಕ್ಕಾರು ನಡ್ಯೋಡಿ ಗುತ್ತು ಭಾಸ್ಕರ್ ಶೆಟ್ಟಿ ಗುರುದೇವ್, ಕುಲಾಲ  ಸಂಘ ಮುಂಬಯಿ ಇದರ ಗೌ.ಅಧ್ಯಕ್ಷ ದೇವದಾಸ ಕುಲಾಲ್, ಅಧ್ಯಕ್ಷ ರಘು ಮೂಲ್ಯ ಪಾದೆಬೆಟ್ಟು, ಉಪಾಧ್ಯಕ್ಷ ಡಿ.ಐ.ಮೂಲ್ಯ, ಬಂಟರ ಸಂಘ ಮುಂಬಯಿ ಇದರ ಭಿವಂಡಿ ಬದ್ಲಾಪುರ ಪ್ರಾದೇಶಿಕ ಸಮಿತಿಯ ಸಂಚಾಲಕ ರವೀಂದ್ರ ಶೆಟ್ಟಿ,

  ಜಗದಂಬಾ ಮಂದಿರದ ಗೌ.ಅಧ್ಯಕ್ಷ  ಹರೀಶ್ ಶೆಟ್ಟಿ, ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ಸುಕುಮಾರ್ ಶೆಟ್ಟಿ, ವಾಚನಾಲಯ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಶೆಟ್ಟಿ, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಡಾ. ದಿವಾಕರ ಶೆಟ್ಟಿ ಇಂದ್ರಾಳಿ, ಉಪಕಾರ್ಯಾಧ್ಯಕ್ಷ ಸುಬ್ಬಯ್ಯ ಎ.ಶೆಟ್ಟಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಸಂಚಾಲಕ ಕರುಣಾಕರ ಶೆಟ್ಟಿ ಕಲ್ಲಡ್ಕ,  ಕಾರ್ಯದರ್ಶಿ ಹೇಮಂತ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಭಾಕರ್ ಶೆಟ್ಟಿ ಕಲ್ಲಡ್ಕ,  ಮಾಜಿ ಕಾರ್ಯಾಧ್ಯಕ್ಷ ರಾಜೀವ್ ಭಂಡಾರಿ, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಪಡುಕುಡೂರು ಅರುಣ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಧ್ಯಕ್ಷ ಸುರೇಶ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ, ಸಮಾಜ ಸೇವಕ ಹರೀಶ್ ಶೆಟ್ಟಿ ಪಡುಕುಡೂರು, ರಂಗ ನಟ, ನಿರ್ದೇಶಕ, ನಾಟಕಕಾರ ಕಲಾಜಗತ್ತುಕಲಾಜಗತ್ತು ನಾಟಕ ತಂಡದ ಸಂಸ್ಥಾಪಕ ತೋನ್ಸೆ  ವಿಜಯಕುಮಾರ್ ಶೆಟ್ಟಿ, ಕಾಪು ಕರಂದಾಡಿ ಸತೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ಸದಾನಂದ ಪಿ.ಕೆ, ದಯಾನಂದ ಶೆಟ್ಟಿ, ವಿಶುಕುಮಾರ್ ಶೆಟ್ಟಿ ಬಲೆ, ಪಾಂಡು ಕೋಟ್ಯಾನ್, ಸದಾನಂದ ಪೂಜಾರಿ, ಮೋಹನ್ ದಾಸ್ ಶೆಟ್ಟಿ, ಜಯ ಕೃಷ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅನಂದ ಶೆಟ್ಟಿ ದಂಪತಿಯ  ಅತ್ಮೀಯರು ಉಪಸ್ಥಿತರಿದ್ದರು.



Related posts

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk

ಬಜ್ಪೆಯಲ್ಲಿ ಮುಂಬೈಯ ಪುರುಷೋತ್ತಮ ಬೆಲ್ಚಡ ದಂಪತಿಗಳಿಂದ ಹರಕೆಯ ಯಕ್ಷಗಾನ ಸೇವೆ: ಕಲಾವಿದರುಗಳಾದ ಅರವಿಂದ ಬೋಳಾರ್ ಹಾಗೂ ಮನ್ವಿತ್ ನಿಡ್ಡೋಡಿ ಅವರಿಗೆ ಸನ್ಮಾನ

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk