July 23, 2026
Mumbai News Kannada
ಸುದ್ದಿ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು







ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 15 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದೆ. 15 ಜನರಿಗೆ ಗಾಯಗೊಂಡಿದ್ದು, ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್​ರಾಜ್​ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಪ್ಲಾಟ್​ಫಾರ್ಮ್​ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್​​​ರಾಜ್​ಗೆ ಹೊರಡುವ​ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್​ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್​ಡಿಆರ್​ಎಫ್​ ಮಾಹಿತಿ ನೀಡಿದೆ.



Related posts

ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಸೋರಿಕೆ ಹಿನ್ನೆಲೆಯಲ್ಲಿ ಎನ್‌ಟಿಎ ಮಹತ್ವದ ನಿರ್ಧಾರ

Mumbai News Desk

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಇಂದಿನ ಪ್ರಮುಖ ಅಪ್‌ಡೇಟ್‌ಗಳು

Mumbai News Desk