30 C
Mumbai
April 24, 2026
Mumbai News Kannada
ಮುಂಬಯಿ

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ





 
ಮಹಾರಾಷ್ಟದ ಪಾಲ್ಗರ್ ಜಿಲ್ಲಾ ವ್ಯಾಪ್ತಿಯ ವಿರಾರ್, ನಾಲಾಸೋಪಾರ, ಭಾಯಂದರ್, ಮೀರಾರೋಡ್ ಪರಿಸರದ ಬಿಲ್ಲವರು ಮತ್ತು ಜಯ ಸುವರ್ಣ ಅಭಿಮಾನಿಗಳಿಗಾಗಿ   ಪೆ 16. ರಂದು ಬೊರಿವಲಿ ತಾಲೂಕಿನ ಫಾರ್ಮ್ ರಿಜನ್ಸಿ ಗೊರೈ ರೆಸಾರ್ಟ್ ನಲ್ಲಿ ವಿಹಾರ ಕೂಟ ನಡೆಯಿತು.

 ಬೆಳಗ್ಗೆ ವಿವಿಧ ಪ್ರದೇಶದಿಂದ ಬಿಲ್ಲವರು ರೆಸಾರ್ಟ್ ನಲ್ಲಿ ಆಗಮಿಸಿ ವಿವಿಧ ಆಟೋಟ, ಪಂದ್ಯ ನೆರವೇರಿಸಿ ವಿಹಾರ ಕೂಟ ಒಂದು ಸವಿ ನೆನಪಾಗಿ ಉಳಿಯುವಲ್ಲಿ ಎಲ್ಲಾ ಬಾಂಧವರು ಸಹಕರಿಸಿದರು.

ಹಲವಾರು ಕಾರ್ಯಕ್ರಮಗಳು ಜರಗಿದ ಬಳಿಕ,ಸಂಜೆ  ಸಮಾರೋಪ ಸಮಾರಂಭ ಜರಗಿತು.

ಈ ಸಮಾರಂಭದ ವೇದಿಕೆಯಲ್ಲಿ  ಭಾರತ್ ಬ್ಯಾಂಕ್ ನಿರ್ದೇಶಕರು, ಬಿಲ್ಲವರ ಎಸೋಸಿಯೇಷನ್ ಮಾಜಿ ಅಧ್ಯಕ್ಷರೂ ಆದ   ಚಂದ್ರಶೇಖರ್ ಎಸ್ ಪೂಜಾರಿ, ಬ್ಯಾಂಕ್ ನಿರ್ದೇಶಕರುಗಳಾದ  ಮೋಹನ್ ದಾಸ್ ಜಿ ಪೂಜಾರಿ,  ಸಂತೋಷ್ ಕೆ ಪೂಜಾರಿ,  ಸುರೇಶ್ ಸುವರ್ಣ,  ನರೇಶ್ ಪೂಜಾರಿ, ಹಾಗೂ ಸಮಾಜ ಸೇವಕಿಯರಾದ  ದೇವಕಿ ಎಸ್ ಕರ್ಕೇರ,  ದೀಪ್ತಿ ಯೋಗೇಶ್ ಸುವರ್ಣ, ಸಮಾಜ ಸೇವಕ ಶಿವಾನಂದ ಬಂಗೇರರು ಉಪಸ್ಥಿತರಿದ್ದರು.          

 ಚಂದ್ರಶೇಖರ್ ಎಸ್ ಪೂಜಾರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಜಯ ಸುವರ್ಣರ ಆದರ್ಶವನ್ನು ಮತ್ತು ಅವರು ನಡೆದ ಹಾದಿಯಲ್ಲಿ ನಾವೆಲ್ಲರೂ ನಡೆದು ಮುಂಬೈಯ ಬಿಲ್ಲವರನ್ನು ಬಲಿಷ್ಠ ಗೊಳಿಸಬೇಕಾಗಿದೆ ಅದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಲ್ಲಿ ಇರಬೇಕು ಎಂದು ನುಡಿದರ.
ವಿಹಾರ ಕೂಟದ ಕುರಿತು ವಿರಾರ್ ನಾಲಾಸೋಪಾರ ಕರ್ನಾಟಕ ಸಂಘದ ಅಧ್ಯಕ್ಷ ಸದಾಶಿವ್ ಕರ್ಕೇರ ಮಾತನಾಡಿ ನಾವೆಲ್ಲರೂ ಒಗ್ಗಟ್ಟಿನಿಂದ ಮುಂದಿನ ದಿನಗಳಲ್ಲೂ ಒಳ್ಳೆಯ ಕಾರ್ಯಕ್ರಮಗಳು ನಡೆಸಿ ಸಮಾಜದ ಜನರಿಗೆ ಆಶಯವಾಗೋಣ ಎಂದು ನುಡಿದರು.

ಕಾರ್ಯಕ್ರಮದ ಯಶಸ್ಸಿಗೆ ಬಿಲ್ಲವ ಯುವ ನಾಯಕರುಗಳಾದ ಭಾಯಂದರ್  ಉದಯ್ ಸುವರ್ಣ, ಅಶೋಕ್ ಸಸಿಹಿತ್ಲು, ಅಕ್ಷಯ್, ಹಾಗೂ ಇನ್ನಿತರ ಯುವಕ ಯುವತಿಯರು ಸಹಕರಿಸಿದರು. ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ನೀಡಿ ಸತ್ಕಾರಿಸಲಾಯಿತು.

ಕಾರ್ಯಕ್ರಮವನ್ನು ಗಣೇಶ್ ಪೂಜಾರಿ ನಿರೂಪಿಸಿದರೆ ಅಶೋಕ್ ಕೆ ಸಸಿಹಿತ್ಲು ಧನ್ಯವಾದ ನೀಡಿದರು.



Related posts

ಮೀರಾರೋಡ್ ಶ್ರೀ ದುರ್ಗಾ ಭಜನ್ ಮಂಡಳಿಯ 18ನೇ ವಾರ್ಷಿಕ ಮಹಾಪೂಜೆ.

Mumbai News Desk

“ಅಂಬರ್ನಾಥ್ ಗೋಪಾಲ್ ಪೂಜಾರಿ” ಯವರಿಗೆ ಬಿಲ್ಲವರ ಅಸೋಸಿಯೇಷನ್, ಡೊಂಬಿವಲಿ ಸ್ಥಳೀಯ ಕಚೇರಿಯ ವತಿಯಿಂದ ಸನ್ಮಾನ

Mumbai News Desk

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಡೊಂಬಿವಿಲಿಯಲ್ಲೊಂದು ಸುಂದರ ಯಕ್ಷ ಸಂಜೆ…

Mumbai News Desk

ಮುಂಬೈ ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣ : ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಜಾಮೀನು

Mumbai News Desk