30.9 C
Mumbai
June 8, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ಮಧ್ವ ನವಮೀ ಆಚರಣೆ 





   ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯಲ್ಲಿರುವ ಉಡುಪಿ ಶ್ರೀ ಪೇಜಾವರ ಮಠದಲ್ಲಿ  ಮಧ್ವ ನವಮೀ ಆಚರಣೆಯನ್ನು ವೈಭವೋಪೇತವಾಗಿ ಆಚರಿಸಲಾಯಿತು. ಶ್ರೀಪೇಜಾವರ ಮಠದ ಮುಖ್ಯ ಪ್ರಬಂಧಕರಾದ ಡಾ! ರಾಮದಾಸ ಉಪಾಧ್ಯಾಯ ಇವರು ಪ್ರಸನ್ನ ಪೂಜೆ ಮಾಡಿ ಆಶೀರ್ವದಿಸಿದರು.  

ಬಳಿಕ ಅಮೇರಿಕಾ ರಾಷ್ಟ್ರದ ನ್ಯೂಯಾರ್ಕ್ ನಗರದಲ್ಲಿ, ಆಚಾರ್ಯ ಮಧ್ವರ ತತ್ವಜ್ಞಾನಪ್ರಸಾರಕಾರ್ಯ ನಡೆಸುತ್ತಿರುವ ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾಂಸರೂ ಶ್ರೀ ಪೇಜಾವರ ಮಠಾಧೀಶರ ಶಿಷ್ಯರೂ ಆದ ವಿದ್ವಾನ್ ಶ್ರೀ ಶ್ರೀಧರ ಆಚಾರ್ಯರು ಉಪನ್ಯಾಸವನ್ನು ನಡೆಸಿಕೊಟ್ಟರು.

ಪರಮಪೂಜ್ಯ ಗುರುಗಳನ್ನು ಸ್ಮರಿಸುವುದರೊಂದಿಗೆ ಶ್ರೀಮಧ್ವಾಚಾರ್ಯರ ಅವತಾರ, ಅವರ ಮಹತ್ವ ಮತ್ತು ಅವರ ಲೀಲೆ.. ಲೋಕಕಲ್ಯಾಣಕ್ಕೆ ನಮ್ಮ ಕರ್ತವ್ಯ ಏನು? ಮುಂತಾದ ವಿಚಾರದಲ್ಲಿ ನೆರೆದ ಭಕ್ತರಿಗೆ ಮನಕ್ಕೆ ಮುದ ನೀಡುವಂತೆ ಸುಂದರವಾಗಿ ತಿಳಿಸಿದರು. 

ಪೇಜಾವರ ಮಠದ “ಮಧ್ವೇಶ ಭಜನಾ ಮಂಡಳಿ” ಯಿಂದ ಹರಿ ನಾಮ ಸಂಕೀರ್ತನೆ.. ನರ್ತನಸೇವೆಯೊಂದಿಗೆ ಕಾರ್ಯಕ್ರಮವು ವೈಭವೋಪೇತವಾಗಿ ಸಂಪನ್ನಗೊಂಡಿತು.

ಆರಂಭದಲ್ಲಿ ಪೇಜಾವರ ಮಠದಲ್ಲಿನ ಶಿಲಾಮಯಮಂದಿರದಲ್ಲಿ ಪ್ರತಿಷ್ಠಾಪಿತ ಶ್ರೀಕೃಷ್ಣನ ಸನ್ನಿಧಾನದಲ್ಲಿ ಅರ್ಚಕ ರಾಮಚಂಡ ಸಾಮಗ ಶಾಸಾನುಸಾರ ದೈನಂದಿನ ಪೂಜಾವಿಧಿಗಳನ್ನು ನೆರವೇರಿಸಿದರು. 

ಶ್ರೀ ಪೇಜಾವರ ಮಠದ ವಿದ್ವಾನ್ ಕೆರ್ವಾಶೆ ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸಹಕರಿಸಿದರು, ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಹಾಪ್ರಸಾದ ಸ್ವೀಕರಿಸಿದರು. 



Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಕರ್ನಾಟಕ ವಿಶ್ವಕರ್ಮ ಎಸೋಸಿಯೇಶನ್ ಮುಂಬಯಿ, ಭಕ್ತಿ, ಸಡಗರದಿಂದ ಜರಗಿದ ವಿಶ್ವಕರ್ಮ ಮಹೋತ್ಸವ.

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಜೋಗೇಶ್ವರಿ : ಸಂಸ್ಕೃತಿ ಅಮೀನ್ ದುರ್ಮರಣ ಪ್ರಕರಣ – ಬಿಲ್ಡರ್ ನ ನಿರೀಕ್ಷಣಾ ಜಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಆರ್ಥಿಕ ನೆರವು ನೀಡುವ ಕಾರ್ಯಕ್ರಮ.

Mumbai News Desk

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.

Mumbai News Desk