July 23, 2026
Mumbai News Kannada
ಸುದ್ದಿ

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.







ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ -ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ


ವರದಿ : ಹರಿಶ್ಚಂದ್ರ ಪಿ. ಸಾಲ್ಯಾನ್, ಮುಲ್ಕಿ.

ಮುಲ್ಕಿ ಫೆ. 18: ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು
ಅವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಹತ್ತು ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿ ಮಾತನಾಡಿದರು
ಅವರು ಮಾತನಾಡಿ ಪುರಾತನ ಕಾಲದ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನ ಕಾರಣಿಕ ನೆಲೆಯನ್ನು ಹೊಂದಿದ್ದು ಭಕ್ತರ ಇಷ್ಟಾರ್ಥವನ್ನು ಈಡೇರಿಸುವ ಶ್ರೀ ವಿಶ್ವನಾಥ ದೇವರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರಿಸುವ ಮೂಲಕ ಊರ ಪರವೂರ ಭಕ್ತರು, ದಾನಿಗಳು ಗ್ರಾಮಸ್ಥರು ಮಾದರಿಯಾಗಬೇಕು ಎಂದರು

ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಡಾ.ಹರಿಕೃಷ್ಣ ಪುನರೂರು ಮಾತನಾಡಿ ಕ್ಷೇತ್ರದ ಅಭಿವೃದ್ಧಿಗೆ ದಾನಿಗಳಾದ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಕೊಡುಗೆ ಅನನ್ಯವಾಗಿದ್ದು ಮುಂದಿನ ದಿನಗಳಲ್ಲಿ ಭಕ್ತರ ಸಹಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆದು ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಜ್ಯೋತಿಷಿ ವಿಶ್ವನಾಥ ಭಟ್,ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್ , ಗೋಪಿನಾಥ ರಾವ್, ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಪುರಂದರ ಶೆಟ್ಟಿಗಾರ್,ಮತ್ತಿತರರು ಉಪಸ್ಥಿತರಿದ್ದರು

ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು



Related posts

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk