September 6, 2026
Mumbai News Kannada
ತುಳುನಾಡು

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ






ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮವು ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮುರಳಿ ಪೂಜಾರಿ ಪಡುಹಿತ್ಲು ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾ. ಸಾ. ಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡುತ್ತಾ ” ತುಳುನಾಡಿನ ಸಂಸ್ಕಾರ ಸಂಸ್ಕೃತಿಯನ್ನು ಈಗಿನ ಜನಾಂಗಕ್ಕೆ ತಿಳಿಸುವುದರಲ್ಲಿ ದೈವ ಪಾತ್ರಿಗಳು ಪ್ರಮುಖರಾಗಿದ್ದಾರೆ.ಅವರು ನಡೆ,ನುಡಿ, ಆಚಾರದ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತಾ ಬರುತ್ತಿದ್ದಾರೆ” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮುಲ್ಕಿ ಬಂಟರ ಸಂಘದ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಹೊಸ ಅಂಗಣ ಪತ್ರಿಕೆ ಮುಲ್ಕಿಯ ಸುತ್ತಮುತ್ತಲಿನ ಸುದ್ದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ ಬೇರೆ ಬೇರೆ ಊರುಗಳಿಗೆ ತಲುಪಿಸುವ ಕೆಲಸ ಮಾಡುತ್ತಿರುವುದು, ಪತ್ರಿಕೆಯ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.
ಅತಿಥಿ ಹಬೀಬುಲ್ಲ ಅವರು ಹೊಸ ಅಂಗಣ ಪತ್ರಿಕೆಯು ಎಂಟು ವರ್ಷಗಳಿಂದ ನಿರಂತರವಾಗಿ ಪ್ರಕಟವಾಗಿ, ಒಳ್ಳೆಯ ಲೇಖನಗಳು ಬರುತ್ತಿರುವುದು
ಸಂತಸ ಎಂದರು.
ಪಡುಹಿತ್ಲು ಜಾರಂದಾಯ ದೈವದ ಪಾತ್ರಿ ಜಯಶೀಲ ಪೂಜಾರಿ, ಕಲ್ಲಟ ಜಾರಂದಾಯ ದೇವಸ್ಥಾನದ ಅರ್ಚಕ ರಮೇಶ್ ಪೂಜಾರಿ, ಉದ್ಯಮಿ ಜೋನ್ ಕಾಡ್ರಸ್, ನಿವೃತ್ತ ಪೊಲೀಸ್ ಅಧಿಕಾರಿ ಕೆ ಎನ್ ಕೋಟ್ಯಾನ್, ಬಂಕಿ ನಾಯಕ್, ಚಿತ್ರಾಪು ಉದ್ಯಮಿ ವಾಸು ಪೂಜಾರಿ, ನಿವೃತ್ತ ಪ್ರಾಂಶುಪಾಲ ವೈ ಎನ್ ಸಾಲಿಯನ್ ಉಪಸ್ಥಿತರಿದರು.
ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರೆ ಜೆ.ಸಿ ದಿನೇಶ್ ವಂದಿಸಿದರು.



Related posts

ಶ್ರೀ ಸಾಯಿ ಪರಿವಾರ್ ಟ್ರಸ್ಟ್ (ರಿ) ತೊಕ್ಕೊಟ್ಟು ಅಭಿನಂದನೆ ಬೊಕ್ಕ ಗುರು ಪೂರ್ಣಿಮೆ ಲೇಸ್

Mumbai News Desk

ಉಡುಪಿಯ ಸರ್ವತೋಮುಖ ಅಭಿವೃದ್ಧಿಗೆ ಮಹತ್ವದ ಮುನ್ನುಡಿ: ‘ವಿಷನ್ 20-30-35’ ಚಿಂತನ ಮಂಥನದಲ್ಲಿ ಗಣ್ಯರ ಮಹತ್ವದ ಸಲಹೆಗಳು

Mumbai News Desk

ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲಿ : ಪ್ರವೀಣ್‌ ಪೂಜಾರಿ ಆಗ್ರಹ.

Mumbai News Desk

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk