32 C
Mumbai
March 7, 2026
Mumbai News Kannada
ಪ್ರಕಟಣೆ

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ





ಬಿಲ್ಲವ ಸಮಾಜದ ಮಹಾನ್ ನಾಯಕ, ಅಭಿವೃದ್ಧಿಯ ಹರಿಕಾರ ದಿ. ಜಯ ಸಿ ಸುವರ್ಣ ಅವರ ಅಭಿಮಾನಿಗಳ, ಹಿತೈಷಿಗಳ ಸಂಘಟನೆ ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ ಮಾರ್ಚ್ 8ರ ಶನಿವಾರ, ಮಧ್ಯಾಹ್ನ 2.30ಗಂಟೆಗೆ ‘ಜಾಗತಿಕ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಆಯೋಜಿಸಲಾಗಿದೆ. ಗೊರೇಗಾಂವ್ ಪೂರ್ವ ದಿ ಜಯ ಸಿ ಸುವರ್ಣ ಮಾರ್ಗ, ಜಯಲೀಲಾ ಬ್ಯಾಂಕ್ವೆಟ್ಸ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಶಿತಾ ಸೂರ್ಯಕಾಂತ ಸುವರ್ಣ ವಹಿಸಲಿದ್ದಾರೆ.
ಈ ಶುಭಾವಸರದಲ್ಲಿ ನಿವೃತ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಭಾರತ್ ಬ್ಯಾಂಕ್ ನ ಮಾಜಿ ಉಪಕಾರ್ಯಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ ಸಾಲ್ಯಾನ್ ಅವರಿಗೆ ‘ಜಯ ಸುವರ್ಣ’ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮುಖ್ಯ ಅತಿಥಿಯಾಗಿ ಥಾಣೆಯ ಮಾಜಿ ಮೇಯರ್ ಮೀನಾಕ್ಷಿ ಶಿಂದೆ ಆಗಮಿಸಲಿರುವರು.
ಗೌರವ ಅತಿಥಿಗಳಾಗಿ ಜಯಲಕ್ಷ್ಮಿ ಪಿ ಸಾಲ್ಯಾನ್, ಜಯಶ್ರೀ ಎಮ್ ಹೆಜಮಾಡಿ, ಆಶಾ ಆರ್ ಬಂಗೇರ, ಶೋಭಾ ಎಸ್ ಪೂಜಾರಿ, ಕೃಪಾ ಬಿ ರಾಠೋಡ್, ಸ್ನೇಹಾ ಪಿ ಪೂಜಾರಿ, ಪ್ರಭಾ ಎನ್ ಸುವರ್ಣ, ಸುಜಾತ ಎಸ್ ಕೋಟ್ಯಾನ್ ಉಪಸ್ಥಿತರಿರುವರು.
ಈ ಸಂಧರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು, ಹಿರಿಯ ನಾಗರಿಕ ದಂಪತಿಗಳನ್ನು, ಹಾಗೂ ಸಮಾಜ ಸೇವೆಯಲ್ಲಿ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸಲಾಗುವುದು.
ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದೊಂದಿಗೆ, ಇತರ ಆಕರ್ಷಕ ವಿನೋದವಳಿ ಸ್ಪರ್ಧೆ ನಡೆಯಲಿದೆ.
ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು, ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಸೆ.7 ರಂದು ಗೋರೆಗಾಂವ್‌ ನಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರದಾನ ಸಮಾರಂಭ

Mumbai News Desk

ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದಹಿಸರ್: ಫೆ.14  ಮತ್ತು 15 ರಂದು 40ನೇ ವರ್ಷದ ವಾರ್ಷಿಕ ಮಹಾಪೂಜಾ ಮಹೋತ್ಸವ ; ಬಲಿ ಉತ್ಸವ, ಸಾಧಕರಿಗೆ ಸನ್ಮಾನ ; ಯಕ್ಷಗಾನ ಪ್ರದರ್ಶನ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk