July 23, 2026
Mumbai News Kannada
ಪ್ರಕಟಣೆ

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ







ಬಿಲ್ಲವ ಸಮಾಜದ ಮಹಾನ್ ನಾಯಕ, ಅಭಿವೃದ್ಧಿಯ ಹರಿಕಾರ ದಿ. ಜಯ ಸಿ ಸುವರ್ಣ ಅವರ ಅಭಿಮಾನಿಗಳ, ಹಿತೈಷಿಗಳ ಸಂಘಟನೆ ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ ಮಾರ್ಚ್ 8ರ ಶನಿವಾರ, ಮಧ್ಯಾಹ್ನ 2.30ಗಂಟೆಗೆ ‘ಜಾಗತಿಕ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಆಯೋಜಿಸಲಾಗಿದೆ. ಗೊರೇಗಾಂವ್ ಪೂರ್ವ ದಿ ಜಯ ಸಿ ಸುವರ್ಣ ಮಾರ್ಗ, ಜಯಲೀಲಾ ಬ್ಯಾಂಕ್ವೆಟ್ಸ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಶಿತಾ ಸೂರ್ಯಕಾಂತ ಸುವರ್ಣ ವಹಿಸಲಿದ್ದಾರೆ.
ಈ ಶುಭಾವಸರದಲ್ಲಿ ನಿವೃತ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಭಾರತ್ ಬ್ಯಾಂಕ್ ನ ಮಾಜಿ ಉಪಕಾರ್ಯಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ ಸಾಲ್ಯಾನ್ ಅವರಿಗೆ ‘ಜಯ ಸುವರ್ಣ’ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮುಖ್ಯ ಅತಿಥಿಯಾಗಿ ಥಾಣೆಯ ಮಾಜಿ ಮೇಯರ್ ಮೀನಾಕ್ಷಿ ಶಿಂದೆ ಆಗಮಿಸಲಿರುವರು.
ಗೌರವ ಅತಿಥಿಗಳಾಗಿ ಜಯಲಕ್ಷ್ಮಿ ಪಿ ಸಾಲ್ಯಾನ್, ಜಯಶ್ರೀ ಎಮ್ ಹೆಜಮಾಡಿ, ಆಶಾ ಆರ್ ಬಂಗೇರ, ಶೋಭಾ ಎಸ್ ಪೂಜಾರಿ, ಕೃಪಾ ಬಿ ರಾಠೋಡ್, ಸ್ನೇಹಾ ಪಿ ಪೂಜಾರಿ, ಪ್ರಭಾ ಎನ್ ಸುವರ್ಣ, ಸುಜಾತ ಎಸ್ ಕೋಟ್ಯಾನ್ ಉಪಸ್ಥಿತರಿರುವರು.
ಈ ಸಂಧರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು, ಹಿರಿಯ ನಾಗರಿಕ ದಂಪತಿಗಳನ್ನು, ಹಾಗೂ ಸಮಾಜ ಸೇವೆಯಲ್ಲಿ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸಲಾಗುವುದು.
ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದೊಂದಿಗೆ, ಇತರ ಆಕರ್ಷಕ ವಿನೋದವಳಿ ಸ್ಪರ್ಧೆ ನಡೆಯಲಿದೆ.
ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು, ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ : ಮಾ. 14ಕ್ಕೆ ವಾರ್ಷಿಕೋತ್ಸವ (ವಿದ್ಯಾರ್ಥಿಗಳಿಗೆ ಧನ ಸಹಾಯ, ಯಕ್ಷಗಾನ ಪ್ರದರ್ಶನ)

Mumbai News Desk

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ

Mumbai News Desk

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಮಾರ್ಚ್ 6ರಂದು ಬಪ್ಪನಾಡಿನಿಂದ ಹಸಿರು ವಾಣಿ ಹೊರೆ ಕಾಣಿಕೆ ಸಮರ್ಪಣೆ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ,.

Mumbai News Desk