28.4 C
Mumbai
March 7, 2026
Mumbai News Kannada
ಮುಂಬಯಿ

ಬಂಟ್ಸ್ ನ್ಯಾಯ ಮಂಡಳಿ ಮುಂಬಯಿ : ನೂತನ ಅಧ್ಯಕ್ಷರಾಗಿ  ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರ ಜಯ ಎ ಶೆಟ್ಟಿ ಶಿಮಂತೂರು  ಆಯ್ಕೆ,





ಮುಂಬೈ ಹಾಗೂ ಉಪನಗರಗಳ ಬಂಟ ಸಮಾಜದ ಬಂಧುಗಳಿಗೆ ನ್ಯಾಯ ಒದಗಿಸಬೇಕೆನ್ನುವ ಉದ್ದೇಶದಿಂದ 25 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಬಂಟ್ಸ್ ನ್ಯಾಯ ಮಂಡಳಿಗೆ ನೂತನ ಅಧ್ಯಕ್ಷರಾಗಿ  ಕಬಡ್ಡಿ ಕ್ರೀಡಾಪಟು, ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾಗಿರುವ ,ಛತ್ರಪತಿ ಶಿವಾಜಿ ಪ್ರಶಸ್ತಿ ಪುರಸ್ಕೃತ, ಸೌತ್ ಕೆನರಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ಸ್ಪೋರ್ಟಿಂಗ್ ಅಸೋಸಿಯೇಷನ್‌ ನ ಕಾರ್ಯದರ್ಶಿ ಜಯ ಎ. ಶೆಟ್ಟಿ ಶಿಮಂತೂರು ಆಯ್ಕೆಯಾಗಿದ್ದಾರೆ,.

 ಫೆ.22 ರಂದು ಕುರ್ಲಾ ಪೂರ್ವದ ಬಂಟರ ಸಂಘದ ಎನೆಕ್ಸ್ ಸಭಾಗೃಹದಲ್ಲಿ ನಡೆದ ಬಂಟ್ಸ್ ನ್ಯಾಯ ಮಂಡಳಿ   ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜಯ ಎ ಶೆಟ್ಟಿ ಅವರಿಗೆb ನ್ಯಾಯಮಂಡಳಿಯ  ಅಧ್ಯಕ್ಷ ನ್ಯಾಯವಾದಿ ಪ್ರಕಾಶ್ ಎಲ್ ಶೆಟ್ಟಿ ಕಡಂದಲೆಯವರು ಹೂಗುಚ್ಚ ನೀಡಿ ಅಭಿನಂದಿಸಿದರು,

  ಜಯ ಎ ಶೆಟ್ಟಿ ಯವರು ಬ್ಯಾಂಕ್ ಆಫ್ ಮಹಾರಾಷ್ಟ್ರದ  ನಿವೃತ್ತ ಅಧಿಕಾರಿ ಆಗಿದ್ದು, ಬಂಟರ ಸಂಘ ಮುಂಬೈಯ ಮಾಜಿ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಸಮಿತಿಯ ಮಾಜಿ ಕಾರ್ಯದರ್ಶಿಯಾಗಿ , ಮಾತೃಭೂಮಿ ಕೋ ಆಪರೇಟಿವ್  ಸೊಸೈಟಿಯ ಮಾಜಿ ಕಾರ್ಯದರ್ಶಿ,
ಹಲವು ಕನ್ನಡ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವರು.ಇವರು ಮಾರ್ಗದರ್ಶನದಲ್ಲಿ
ನಗರದ ವಿವಿಧ ಸಂಘ, ಸಂಸ್ಥೆಗಳ ಕ್ರೀಡಾಕೂಟವು ಯಶಸ್ವಿಯಾಗಿ ನಡೆಯುವಲ್ಲಿ ಸಹಕಾರಿಯಾಗಿದೆ,          ಪ್ರತಿ ವರ್ಷ ಬಂಟರ ಸಂಘ ನಡೆಸುವ ಕ್ರೀಡಾಕೂಟದ ಯಶಸ್ವಿಗೆ ಇವರ ಪೂರ್ಣ ಸಹಕಾರ ಮುಖ್ಯ ಕಾರಣವಾಗಿದೆ, ಕಾರ್ಕಳದ ಗ್ರಾಮೀಣ ಪ್ರದೇಶದಲ್ಲಿ ಎರಡು ಬಾರಿ ನಡೆದ ಅಂತರಾಷ್ಟ್ರೀಯ ಮಟ್ಟದ ಕಬ್ಬಡಿ  ಪಂದ್ಯಾಟಕ್ಕೆ ಮುಖ್ಯ ಮಾರ್ಗದರ್ಶಕರಾಗಿದ್ದಾರು,ಅಲ್ಲದೆ
ದೇಶದ ಪ್ರಮುಖ ರಾಜ್ಯಗಳಲ್ಲಿ ಕಬ್ಬಡಿ ಆಟವಾಡಿದ ಅನುಭವ ಅಲ್ಲದೆ ತೀರ್ಪುಗಾರರಾಗಿ ಕೂಡ ಕಾರ್ಯನಿರ್ವಹಿಸಿದವರು,

 ಕ್ರೀಡಾ ಮೈದಾನದಲ್ಲಿ ಆಟಗಾರರಿಗೆ ನ್ಯಾಯ  ನೀಡುವಲ್ಲಿ ಸಮರ್ಥರೆನಿಸಿಕೊಂಡವರು, ಇವರ ಕ್ರೀಡಾ ಅಭಿಮಾನವನ್ನು ಗುರುತಿಸಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು  ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ,

ಜಯ ಶೆಟ್ಟಿ ಅವರ ಪರಿವಾರ ಕಬ್ಬಡಿ ಆಟಗಾರರ ಪರಿವಾರವಾಗಿದ್ದು, ಪತ್ನಿ ರಾಷ್ಟ್ರೀಯ ಕಬಡ್ಡಿ ಆಟಗಾರರಾಗಿದ್ದು ,
ಮಗ ಕೂಡ ರಾಷ್ಟ್ರೀಯ ಕಬಡ್ಡಿ ಆಟಗಾರರಾಗಿದ್ದು ಇವರಿಬ್ಬರಿಗೂ ಛತ್ರಪತಿ ಶಿವಾಜಿ ಪ್ರಶಸ್ತಿಯನ್ನು ಮಹಾರಾಷ್ಟ್ರ ಸರಕಾರ ನೀಡಿ ಗೌರವಿಸಿದೆ.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅಂಕಿತಾ ಭಾಸ್ಕರ್ ಭಂಡಾರಿ ಗೆ ಶೇ 82.60 ಅಂಕ.

Mumbai News Desk

ವಿದ್ಯಾದಾಯಿನಿ ಸಭಾ ಫೋರ್ಟ್ ವತಿಯಿಂದ ಗುರುಜಯಂತಿ ಉತ್ಸವಾಚರಣೆ.

Mumbai News Desk

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವಕ್ಕೆ ಚಾಲನೆ.

Mumbai News Desk

ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ ಸಂಪನ್ನ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಪ್ರದಾನ

Mumbai News Desk