30 C
Mumbai
April 24, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ






ಕಲ್ಯಾಣ (ಪ):3 ಮಾರ್ಚ್ 25 : ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ.ಶಾರದ ಭಾಸ್ಕರ ಶೆಟ್ಟಿಯವರ ಪ್ರೇರಣೆಯಿಂದ ಕಳೆದ ಸುಮಾರು 21 ವರ್ಷಗಳಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಾರ್ಷಿಕ ಕಾರ್ಯಕ್ರಮವಾಗಿ ನಡೆಸುತ್ತಾ ಬಂದಿದ್ದು ಈ ವರ್ಷ ಇದೇ ಬರುವ 9 ಮಾರ್ಚ್ ರಂದು ಮುರ್ಬಾಡ್ ರಸ್ತೆ ಕಲ್ಯಾಣ ಪಶ್ಚಿಮದ ಬ್ರಾಹ್ಮಣ ಸೊಸೈಟಿ ಸಭಾಗ್ರಹದಲ್ಲಿ ಸಂಜೆ 5 ರಿಂದ ಆಚರಿಸಲಿದ್ದೇವೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಂಘಟಕಿ ಹಾಗೂ ಸಮಾಜ ಸೇವಕಿ ಶ್ರೀಮತಿ ಕವಿತಾ ಮಿಶ್ರಾ ಹಾಗೂ ಗೌರವ ಅತಿಥಿಯಾಗಿ ಯೋಗ ಪ್ರಚಾರಕಿ ಶ್ರೀಮತಿ ವೀಣಾ ನಿಮ್ಕರ್ ರವರು ಆಗಮಿಸಲಿದ್ದಾರೆ.ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ಶ್ರೀಮತಿ ಮಹಾಲಕ್ಷ್ಮಿ ತೋರ್ವಿ ಯವರನ್ನು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಪ್ರದ್ನ್ಯಾ ಬಾಬನ್ನವರ್ ರವರನ್ನು ತಮ್ಮ ಅಪ್ರತಿಮ, ನಿಸ್ವಾರ್ಥ ಸೇವೆಗಾಗಿ ಸತ್ಕರಿಸಲಾಗುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಲ್ಲಾ ಮಹಿಳೆಯರು ಹಾಗೂ ಮಹನೀಯರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಕಾಣಿಸಿ ಕೊಡಬೇಕಾಗಿ ಸಂಘದ ಅಧ್ಯಕ್ಷ ಕೆ.ಎನ್.ಸತೀಶ್, ಉಪಾಧ್ಯಕ್ಷರಾದ ಜಯಂತಿ ಹೆಗ್ಡೆ ಹಾಗೂ ವಿಜಯ್ ಪೈ,ಮಹಿಳಾಧ್ಯಕ್ಷೆ ವೀಣಾ ಕಾಮತ್, ಗೌರವ ಕಾರ್ಯದರ್ಶಿ ಜಯಂತ ದೇಶಮುಖ ಹಾಗೂ ಸಮಸ್ತ ಕಾರ್ಯಕಾರಿ ಸಮಿತಿ ಸದಸ್ಯರು ಈ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk

ಮೇ 2: ಇನ್ನಂಜೆ  ಶಶಿಧರ ಶೆಟ್ಟಿ  ದಂಪತಿಯ ನೇತೃತ್ವದಲ್ಲಿ ಕಾಪು ಶೃಷ್ಟಿ ರೆಸಿಡೆನ್ಸಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk