July 23, 2026
Mumbai News Kannada
ಕರ್ನಾಟಕ

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ








ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ನಗರದ ತಾಪಮಾನ ಇಳಿಕೆಯಾಗಿದೆ.
ಸಂಜೆ 6 ಗಂಟೆಗೆ ಬೆಂಗಳೂರಿನ ಹಲವು ಕಡೆ ಮಳೆ ಆರಂಭವಾಗಿದ್ದು, ಶಾಂತಿ ನಗರ, ಕಾಪೋರೇಷನ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ . ಇಂದು ಸುರಿದ ಮಳೆಯಿಂದ ಬೆಂಗಳೂರಿನ ತಾಪಮಾನ ಕುಸಿತವಾಗಿದ್ದು, ಬೇಸಿಗೆಯ ಮೊದಲ ಮಳೆಯಾಗಿದ್ದರಿಂದ ಬಿಸಿಲಿನಿಂದ ಕಂಗೆಟ್ಟಿದ ಜನರಿಗೆ ತಂಪನೆಯ ವಾತಾವರಣ ನಿರ್ಮಾಣವಾಗಿದೆ.
ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯೇ ಮಾರ್ಚ್ 14ರ ವರೆಗೆ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 14ರ ತನಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.



Related posts

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ವಿಧಾನಸಭಾ ಸದಸ್ಯತ್ವ ರದ್ದು,

Mumbai News Desk

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಮಂಗಳೂರು : ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

Mumbai News Desk